22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ತಾಯಿ-ತಂದೆ-ಗುರುಗಳನ್ನು ನಾವು ಜೀವನ ಪರ್ಯಂತ ನೆ‌ನಪಿನಲ್ಲಿಟ್ಟುಕೊಳ್ಳಬೇಕು. ವಿದ್ಯೆಯಿಂದ ವಿನಯವಂತರಾಗೋಣ. ರಾಷ್ಟ್ರಹಿತದ ಕಾರ್ಯಕ್ಕೆ ನೆರವಾಗೋಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು.


ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿನ ಮಕ್ಕಳಿಗೆ ಹಾಗೂ ಅಂಗನವಾಡಿ ಪುಟಾಣಿಗಳಿಗೆ ರೋಟರಿ ಕ್ಲಬ್ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 16 ನೇ ವರ್ಷದ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳನ್ನು ಜೂ.14 ರಂದು ವಿತರಿಸಿ ಅವರು ಮಾತನಾಡಿದರು.


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ವಹಿಸಿದ್ದರು.
ಪುಸ್ತಕಗಳ ದಾನಿಗಳಾದ ದಂತ ವೈದ್ಯ ಡಾl ಶಶಿಧರ ಡೋಂಗ್ರೆ, ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ಡೋಂಗ್ರೆ, ಡಾl ಸುಷ್ಮಾ ಡೋಂಗ್ರೆ, ಜ್ಯೋತಿ ಪ್ರತಾಪಸಿಂಹ ನಾಯಕ್, ಅಳದಂಗಡಿ ಗ್ರಾ.ಪಂ. ಸದಸ್ಯ ಪ್ರವೀಣ, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ ಉಪಸ್ಥಿತರಿದ್ದರು.
ಡಾl ಡೋಂಗ್ರೆಯವರು ಅಕ್ಷರ ದಾಸೋಹಕ್ಕೆ 16 ಲೀ.ಸಾಮರ್ಥ್ಯದ ಕುಕ್ಕರ್‌ನ್ನು ಕೊಡುಗೆಯಾಗಿಯೂ ನೀಡಿದರು. ನಾಯಕ್ ಅವರು ಶಾಲಾಭಿವೃದ್ಧಿಗೆ ರೂ.5,000 ದೇಣಿಗೆ ನೀಡಿದರು. ಶಾಲಾ ಹಳೆವಿದ್ಯಾರ್ಥಿ ಕೃಷ್ಣ ಆಠವಳೆ ಅವರು ಈ ಬಾರಿಯ ಎಸ್.ಎಸ್.ಎಲ್.ಸಿ.ಯಲ್ಲಿ ಉನ್ನತ ಶ್ರೇಣಿಯನ್ನು ಪಡೆದಿರುವುದಕ್ಕೆ ಅವರನ್ನು ಪುರಸ್ಕರಿಸಲಾಯಿತು.


ಶಾಲಾ‌ ಮುಖ್ಯೋಪಾಧ್ಯಾಯಿನಿ ಲೀನಾ ಮೋರಾಸ್ ಸ್ವಾಗತಿಸಿ ವಂದಿಸಿದರು. ದೀಪಕ ಆಠವಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!