September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಗೋಪಿ ಹಾಗೂ ಆಶಾ ಕಾರ್ಯಕರ್ತೆಯರಿಂದ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯ ಮೊದಲಾದ ರೋಗಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ನೀರು ನಿಲ್ಲುವಂತಹ ಸ್ಥಳ, ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕಾದ ರೀತಿ, ವಿವಿಧ ರೋಗಗಳಾದ ಮಲೇರಿಯ, ಡೆಂಗ್ಯೂ ರೋಗ ಬರುವ ಸೊಳ್ಳೆಗಳಾದ ಅನಾಫಿಲೀಸ್, ಈಡಿಸ್ ಬಗ್ಗೆ ಹೇಳುತ್ತ ರೋಗ ಲಕ್ಷಣಗಳ ಕುರಿತು ವಿವರಿಸಿದರು, ಜ್ವರ ಬಂದಾಗ ರಕ್ತ ಪರೀಕ್ಷೆ ಮಾಡಿಯೇ ಔಷಧ ತೆಗೆದು ಕೊಳ್ಳಲು ತಿಳಿಸಿದರು. ಡೆಂಗ್ಯೂ ವಿನಂತಹ ಮಾರಣಾಂತಿಕ ಕಾಯಿಲೆಗೆ ನಿರ್ಧಿಷ್ಟವಾದ ಔಷಧವೂ ಇಲ್ಲದ ಕಾರಣ ಬರದಂತೆ ತಡೆಯುವುದು ಅತೀ ಮುಖ್ಯ ಎಂದರು.

ಅತೀ ಹೆಚ್ಚು ನೀರು ಕುಡಿಯುವುದು, ವ್ಯಾಯಮದಂತಹ ಹವ್ಯಾಸಗಳು ಕೂಡಾ ಆರೋಗ್ಯವನ್ನು ಕಾಪಾಡುತ್ತದೆ. ಎಂಬ ಮಾಹಿತಿಗಳು ವಿದ್ಯಾರ್ಥಿಗಳಲ್ಲಿ ಆರೋಗ್ಯದ ಕುರಿತು ಜಾಗೃತಿಯನ್ನು ಮೂಡಿಸಿತು. ಬಳಿಕ ಪೈಲೇರಿಯ -ಕ್ಯೂಲೆಸ್ ಜಾತಿಯ ಸೊಳ್ಳೆಯು ಅಶುದ್ಧ ನೀರಿನಲ್ಲಿ ಮೊಟ್ಟೆ ಇಟ್ಟು ಬರುವ ಆನೆ ಕಾಲು ರೋಗದ ಬಗ್ಗೆ ತಿಳಿಸಿದರು. ಅದೇ ರೀತಿ ಫಾಗಿಂಗ್ ಬಗ್ಗೆಯು ಮಾಹಿತಿ ತಿಳಿಸಿದರು. ತದ ನಂತರ ಆಶಾ ಕಾರ್ಯಕರ್ತರಾದ ಯಮುನ ಇವರು ಒರಳು ಕಲ್ಲು, ಅಡಿಕೆ ಹಾಳೆ ಯಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕಾದ ಕ್ರಮ ದ ಬಗ್ಗೆ ಹೇಳುತ್ತ ಟೈಫಾಯಿಡ್ ರೋಗ ಬರುವ ರೀತಿ ಹೇಳುತ್ತಾ ಕುದಿಸಿ ಆರಿಸಿದ ನೀರನ್ನು ಕುಡಿಯುವಂತೆ ಮಾಹಿತಿ ನೀಡಿದರು. ಮುಖ್ಯ ಗುರುಗಳಾದ ಪ್ರಭಾಕರ್ ರವರು ಸ್ವಾಗತಿಸಿ ಧನ್ಯವಾದಗೈದರು.

Related posts

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ (ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ) ದಂತ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya

ಮುಗ್ಗ ಗುತ್ತಿನ ಮನೆತನದ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!