30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಗೋಪಿ ಹಾಗೂ ಆಶಾ ಕಾರ್ಯಕರ್ತೆಯರಿಂದ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯ ಮೊದಲಾದ ರೋಗಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ನೀರು ನಿಲ್ಲುವಂತಹ ಸ್ಥಳ, ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕಾದ ರೀತಿ, ವಿವಿಧ ರೋಗಗಳಾದ ಮಲೇರಿಯ, ಡೆಂಗ್ಯೂ ರೋಗ ಬರುವ ಸೊಳ್ಳೆಗಳಾದ ಅನಾಫಿಲೀಸ್, ಈಡಿಸ್ ಬಗ್ಗೆ ಹೇಳುತ್ತ ರೋಗ ಲಕ್ಷಣಗಳ ಕುರಿತು ವಿವರಿಸಿದರು, ಜ್ವರ ಬಂದಾಗ ರಕ್ತ ಪರೀಕ್ಷೆ ಮಾಡಿಯೇ ಔಷಧ ತೆಗೆದು ಕೊಳ್ಳಲು ತಿಳಿಸಿದರು. ಡೆಂಗ್ಯೂ ವಿನಂತಹ ಮಾರಣಾಂತಿಕ ಕಾಯಿಲೆಗೆ ನಿರ್ಧಿಷ್ಟವಾದ ಔಷಧವೂ ಇಲ್ಲದ ಕಾರಣ ಬರದಂತೆ ತಡೆಯುವುದು ಅತೀ ಮುಖ್ಯ ಎಂದರು.

ಅತೀ ಹೆಚ್ಚು ನೀರು ಕುಡಿಯುವುದು, ವ್ಯಾಯಮದಂತಹ ಹವ್ಯಾಸಗಳು ಕೂಡಾ ಆರೋಗ್ಯವನ್ನು ಕಾಪಾಡುತ್ತದೆ. ಎಂಬ ಮಾಹಿತಿಗಳು ವಿದ್ಯಾರ್ಥಿಗಳಲ್ಲಿ ಆರೋಗ್ಯದ ಕುರಿತು ಜಾಗೃತಿಯನ್ನು ಮೂಡಿಸಿತು. ಬಳಿಕ ಪೈಲೇರಿಯ -ಕ್ಯೂಲೆಸ್ ಜಾತಿಯ ಸೊಳ್ಳೆಯು ಅಶುದ್ಧ ನೀರಿನಲ್ಲಿ ಮೊಟ್ಟೆ ಇಟ್ಟು ಬರುವ ಆನೆ ಕಾಲು ರೋಗದ ಬಗ್ಗೆ ತಿಳಿಸಿದರು. ಅದೇ ರೀತಿ ಫಾಗಿಂಗ್ ಬಗ್ಗೆಯು ಮಾಹಿತಿ ತಿಳಿಸಿದರು. ತದ ನಂತರ ಆಶಾ ಕಾರ್ಯಕರ್ತರಾದ ಯಮುನ ಇವರು ಒರಳು ಕಲ್ಲು, ಅಡಿಕೆ ಹಾಳೆ ಯಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕಾದ ಕ್ರಮ ದ ಬಗ್ಗೆ ಹೇಳುತ್ತ ಟೈಫಾಯಿಡ್ ರೋಗ ಬರುವ ರೀತಿ ಹೇಳುತ್ತಾ ಕುದಿಸಿ ಆರಿಸಿದ ನೀರನ್ನು ಕುಡಿಯುವಂತೆ ಮಾಹಿತಿ ನೀಡಿದರು. ಮುಖ್ಯ ಗುರುಗಳಾದ ಪ್ರಭಾಕರ್ ರವರು ಸ್ವಾಗತಿಸಿ ಧನ್ಯವಾದಗೈದರು.

Related posts

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya
error: Content is protected !!