July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಗೋಪಿ ಹಾಗೂ ಆಶಾ ಕಾರ್ಯಕರ್ತೆಯರಿಂದ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯ ಮೊದಲಾದ ರೋಗಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ನೀರು ನಿಲ್ಲುವಂತಹ ಸ್ಥಳ, ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕಾದ ರೀತಿ, ವಿವಿಧ ರೋಗಗಳಾದ ಮಲೇರಿಯ, ಡೆಂಗ್ಯೂ ರೋಗ ಬರುವ ಸೊಳ್ಳೆಗಳಾದ ಅನಾಫಿಲೀಸ್, ಈಡಿಸ್ ಬಗ್ಗೆ ಹೇಳುತ್ತ ರೋಗ ಲಕ್ಷಣಗಳ ಕುರಿತು ವಿವರಿಸಿದರು, ಜ್ವರ ಬಂದಾಗ ರಕ್ತ ಪರೀಕ್ಷೆ ಮಾಡಿಯೇ ಔಷಧ ತೆಗೆದು ಕೊಳ್ಳಲು ತಿಳಿಸಿದರು. ಡೆಂಗ್ಯೂ ವಿನಂತಹ ಮಾರಣಾಂತಿಕ ಕಾಯಿಲೆಗೆ ನಿರ್ಧಿಷ್ಟವಾದ ಔಷಧವೂ ಇಲ್ಲದ ಕಾರಣ ಬರದಂತೆ ತಡೆಯುವುದು ಅತೀ ಮುಖ್ಯ ಎಂದರು.

ಅತೀ ಹೆಚ್ಚು ನೀರು ಕುಡಿಯುವುದು, ವ್ಯಾಯಮದಂತಹ ಹವ್ಯಾಸಗಳು ಕೂಡಾ ಆರೋಗ್ಯವನ್ನು ಕಾಪಾಡುತ್ತದೆ. ಎಂಬ ಮಾಹಿತಿಗಳು ವಿದ್ಯಾರ್ಥಿಗಳಲ್ಲಿ ಆರೋಗ್ಯದ ಕುರಿತು ಜಾಗೃತಿಯನ್ನು ಮೂಡಿಸಿತು. ಬಳಿಕ ಪೈಲೇರಿಯ -ಕ್ಯೂಲೆಸ್ ಜಾತಿಯ ಸೊಳ್ಳೆಯು ಅಶುದ್ಧ ನೀರಿನಲ್ಲಿ ಮೊಟ್ಟೆ ಇಟ್ಟು ಬರುವ ಆನೆ ಕಾಲು ರೋಗದ ಬಗ್ಗೆ ತಿಳಿಸಿದರು. ಅದೇ ರೀತಿ ಫಾಗಿಂಗ್ ಬಗ್ಗೆಯು ಮಾಹಿತಿ ತಿಳಿಸಿದರು. ತದ ನಂತರ ಆಶಾ ಕಾರ್ಯಕರ್ತರಾದ ಯಮುನ ಇವರು ಒರಳು ಕಲ್ಲು, ಅಡಿಕೆ ಹಾಳೆ ಯಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕಾದ ಕ್ರಮ ದ ಬಗ್ಗೆ ಹೇಳುತ್ತ ಟೈಫಾಯಿಡ್ ರೋಗ ಬರುವ ರೀತಿ ಹೇಳುತ್ತಾ ಕುದಿಸಿ ಆರಿಸಿದ ನೀರನ್ನು ಕುಡಿಯುವಂತೆ ಮಾಹಿತಿ ನೀಡಿದರು. ಮುಖ್ಯ ಗುರುಗಳಾದ ಪ್ರಭಾಕರ್ ರವರು ಸ್ವಾಗತಿಸಿ ಧನ್ಯವಾದಗೈದರು.

Related posts

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!