ತಾಲೂಕು ಸುದ್ದಿಪ್ರಮುಖ ಸುದ್ದಿ

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

ಬೆಳ್ತಂಗಡಿ: ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದ್ದಾರೆ.
ಪಂಚ ಭಾಗ್ಯಗಳನ್ನು ನೀಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ಸರಕಾರ ಇದೀಗ ಆರ್ಥಿಕ ಹಿನ್ನಡೆಯಿಂದ ಬಳಲುತ್ತಿದೆ. ಯಾವುದೇ ಅಭಿವೃದ್ಧಿಕಾರ್ಯಗಳಿಗೆ ಹಣ ಇಲ್ಲದೆ ಪರದಾಡುತ್ತಿದೆ. ಇದರಿಂದ ಸ್ವಪಕ್ಷೀಯರೇ ಅಸಮಾಧಾನಗೊಂಡಿದ್ದು ಮುಖ್ಯಮಂತ್ರಿಯವರು ಕಂಗಾಲಾಗಿರುವುದು ಸ್ಪಷ್ಟ. ಉಚಿತ ಭಾಗ್ಯಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದ್ದು ಅದನ್ನು ಭರಿಸುವುದಕ್ಕೋಸ್ಕರ ಇದೀಗ ಪೆಟ್ರೋಲ್ ನ ಸೆಸ್ ಏರಿಸಿರುವುದು ಜನ ಸಾಮಾನ್ಯರಿಗೆ ಹೊರೆಯಾಗಲಿದೆ. ಸರಕಾರ ಏಕಾಏಕಿ ಪೆಟ್ರೋಲ್ ದರ ಏರಿಸಿರುವುದು ಖಂಡನೀಯ ಇದನ್ನು ಹಿಂತೆಗೆದುಕೊಳ್ಳಬೇಕು ಎಂದು ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya
error: Content is protected !!