May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

ಬಳಂಜ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇದರ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ-ಧರ್ಮಸ್ಥಳ, ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು, ಶ್ರೀಮಾತಾ ನಾಲ್ಕೂರು, ಜ್ಯೋತಿ ಯುವತಿ ಮಂಡಲ ಬಳಂಜ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 15ರಿಂದ 21ರ ವರೆಗೆ ಉಚಿತ ಯೋಗ ಶಿಬಿರ ನಡೆಯಲಿದ್ದು ಇದರ ಉದ್ಘಾಟನೆಯು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಬಳಂಜದಲ್ಲಿ ನಡೆಯಿತು.

ಹಿರಿಯರು ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ಅನಸೂಯ ದೀಪ ಬೆಳಗಿಸಿ ಉಚಿತ ಯೋಗ ಶಿಬಿರಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್., ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ, ಅಳದಂಗಡಿ ಪ್ರಾ.ಕೃ.ಪ.ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಪ್ರಮುಖರಾದ ಕರುಣಾಕರ ಹೆಗ್ಡೆ ಬೊಕ್ಕಸ, ಸದಾನಂದ ಸಾಲಿಯಾನ್ ಬಳಂಜ, ಸತೀಶ್ ಬರಮೇಲು, ಸಂಘದ ನಿರ್ದೇಶಕ ರಂಜಿತ್ , ಕಾರ್ಯದರ್ಶಿ ಜಗದೀಶ್ ಪೂಜಾರಿ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಯೋಗ ತರಬೇತಿಯನ್ನು ಡಾ.ಅಭಿಷೇಕ್ ಮತ್ತು ಸುಶ್ಮಿತಾ ಶೆಟ್ಟಿ ಉಜಿರೆ ಇವರು ನಡೆಸಿದರು.

ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಪ್ರತಿದಿನ ಬೆಳಿಗ್ಗೆ ಗಂಟೆ 5.30 ರಿಂದ 6.30 ಯೋಗ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9900806088 ನಂಬರನ್ನು ಸಂಪರ್ಕಿಸಬಹುದು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya
error: Content is protected !!