ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್.15 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಪ್ರಾಂಜಲ್ ಡಿ ಶೆಟ್ಟಿ ಹಾಗೂ ಶಾಲಾ ಉಪ ನಾಯಕನಾಗಿ ಸಿಯೋನ್ ರಾಜ್ ಇವರನ್ನು ಆಯ್ಕೆ ಮಾಡಿರುತ್ತಾರೆ.
ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ಕುನಾರ್, ನೀರಾವರಿ ಮಂತ್ರಿ ಮಾನ್ಯ, ಸಾಂಸ್ಕೃತಿಕ ಮಂತ್ರಿ ಶ್ರೀಮ, ಆರೋಗ್ಯ ಮಂತ್ರಿ ಚಂಪಾ, ಕ್ರೀಡಾ ಮಂತ್ರಿ ರೊಹಾನಿ, ಶಿಸ್ತು ಮಂತ್ರಿಯಾಗಿ ಸನ್ವಿತ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ ಹಾಗೂ ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಶಿಕ್ಷಕ ವೃಂದದವರು ಅಭಿನಂದಿಸಿದರು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಶಾಲಾ ಸಂಸತ್ತು ಸಂಯೋಜಕರಾದ ಸವಿತಾ ಮತ್ತು ಗಣೇಶ್ ಚುನಾವಣೆಯ ಜವಾಬ್ದಾರಿ ವಹಿಸಿದ್ದರು.

Related posts

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಗೌರಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಕಾಲೇಜು : ವಿದ್ಯಾರ್ಥಿ ತಯಾರಿಕೆಯ 30ಕ್ಕೂ ಅಧಿಕ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಓಡಿಲ್ನಾಳ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!