July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ಕಾಲೇಜಿಗೆ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಜರುಗಿತು.

ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಸಭಾಧ್ಯಕ್ಷತೆ ವಹಿಸಿ ಮಾತನಾಡುತ್ತಾ ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ನಾವು ಅವಕಾಶವನ್ನು ನೀಡುತ್ತೇವೆ. ಇದರ ಸದುಪಯೋಗ ಪಡೆದುಕೊಂಡು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಕರೆ ನೀಡಿದರು. ಎಲ್ಲಾ ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂಸ್ಥೆಯ ಶಿಸ್ತು ಹಾಗೂ ನಿಯಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ 90ಕ್ಕಿಂತ ಅಧಿಕ ಅಂಕ ಗಳಿಸಿದ 9 ಮಂದಿ ವಿದ್ಯಾರ್ಥಿಗಳಿಗೆ ಉಪನ್ಯಾಸಕರಾದ ಶ್ರೀಮತಿ ವಸಂತಿ ಪಿ. ಇವರು ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿ ರಕ್ಷಿತ್ ವೈ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿಜೇತ್ ಸ್ವಾಗತಿಸಿ, ಫಾತಿಮತುಲ್ ರಸೀನಾ ವಂದಿಸಿದರು.

Related posts

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya
error: Content is protected !!