25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

ಬೆಳ್ತಂಗಡಿ: ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದ್ದಾರೆ.
ಪಂಚ ಭಾಗ್ಯಗಳನ್ನು ನೀಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ಸರಕಾರ ಇದೀಗ ಆರ್ಥಿಕ ಹಿನ್ನಡೆಯಿಂದ ಬಳಲುತ್ತಿದೆ. ಯಾವುದೇ ಅಭಿವೃದ್ಧಿಕಾರ್ಯಗಳಿಗೆ ಹಣ ಇಲ್ಲದೆ ಪರದಾಡುತ್ತಿದೆ. ಇದರಿಂದ ಸ್ವಪಕ್ಷೀಯರೇ ಅಸಮಾಧಾನಗೊಂಡಿದ್ದು ಮುಖ್ಯಮಂತ್ರಿಯವರು ಕಂಗಾಲಾಗಿರುವುದು ಸ್ಪಷ್ಟ. ಉಚಿತ ಭಾಗ್ಯಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದ್ದು ಅದನ್ನು ಭರಿಸುವುದಕ್ಕೋಸ್ಕರ ಇದೀಗ ಪೆಟ್ರೋಲ್ ನ ಸೆಸ್ ಏರಿಸಿರುವುದು ಜನ ಸಾಮಾನ್ಯರಿಗೆ ಹೊರೆಯಾಗಲಿದೆ. ಸರಕಾರ ಏಕಾಏಕಿ ಪೆಟ್ರೋಲ್ ದರ ಏರಿಸಿರುವುದು ಖಂಡನೀಯ ಇದನ್ನು ಹಿಂತೆಗೆದುಕೊಳ್ಳಬೇಕು ಎಂದು ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya
error: Content is protected !!