25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

ಬೆಳ್ತಂಗಡಿ: ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದ್ದಾರೆ.
ಪಂಚ ಭಾಗ್ಯಗಳನ್ನು ನೀಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ಸರಕಾರ ಇದೀಗ ಆರ್ಥಿಕ ಹಿನ್ನಡೆಯಿಂದ ಬಳಲುತ್ತಿದೆ. ಯಾವುದೇ ಅಭಿವೃದ್ಧಿಕಾರ್ಯಗಳಿಗೆ ಹಣ ಇಲ್ಲದೆ ಪರದಾಡುತ್ತಿದೆ. ಇದರಿಂದ ಸ್ವಪಕ್ಷೀಯರೇ ಅಸಮಾಧಾನಗೊಂಡಿದ್ದು ಮುಖ್ಯಮಂತ್ರಿಯವರು ಕಂಗಾಲಾಗಿರುವುದು ಸ್ಪಷ್ಟ. ಉಚಿತ ಭಾಗ್ಯಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದ್ದು ಅದನ್ನು ಭರಿಸುವುದಕ್ಕೋಸ್ಕರ ಇದೀಗ ಪೆಟ್ರೋಲ್ ನ ಸೆಸ್ ಏರಿಸಿರುವುದು ಜನ ಸಾಮಾನ್ಯರಿಗೆ ಹೊರೆಯಾಗಲಿದೆ. ಸರಕಾರ ಏಕಾಏಕಿ ಪೆಟ್ರೋಲ್ ದರ ಏರಿಸಿರುವುದು ಖಂಡನೀಯ ಇದನ್ನು ಹಿಂತೆಗೆದುಕೊಳ್ಳಬೇಕು ಎಂದು ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related posts

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಮಚ್ಚಿನ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಸಂಪೂರ್ಣ ಸುರಕ್ಷ ಕಾರ್ಡ್ ವಿತರಣೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya
error: Content is protected !!