25.8 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯನ್ನು ಜೂ15 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಬಕ್ರೀದ್ ಹಬ್ಬದ ಆಚರಣೆಯನ್ನು ಹಾಡು, ನೃತ್ಯದ ಮೂಲಕ ಪ್ರದರ್ಶಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಈ ಕಾರ್ಯಕ್ರಮವು ಎಲ್ಲರಿಗೂ ಅರ್ಥವನ್ನು ಕಲ್ಪಿಸುವ ಕಾರ್ಯಕ್ರಮವಾಗಿದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯಗಳು ಕೋರಿದರು.

ಮಡಂತ್ಯಾರು ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ ಒಸ್ಮಾಂಡ್ ರೋಶನ್ ಡಿಸೋಜ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಬಕ್ರೀದ್ ಹಬ್ಬವು ತ್ಯಾಗದ ಸಂಕೇತವಾಗಿದೆ, ನಾವೆಲ್ಲರೂ ನಮ್ಮ ಹೆತ್ತವರಿಗೆ, ಗುರುಗಳಿಗೆ ವಿಧೇಯತೆಯನ್ನು ತೋರಿಸಬೇಕು ಎಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಕುಮಾರಿ ಅಸ್ನ ರವರು ನಿರೂಪಿಸಿ, ಮುಹೀನುದ್ದೀನ್ ರವರು ಸ್ವಾಗತಿಸಿ, ಕುಮಾರಿ ಆಯಿಷಾ ಸರ ರವರು ಧನ್ಯವಾದವಿತ್ತರು. ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಸಹಕರಿಸಿದರು.

Related posts

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya
error: Content is protected !!