September 6, 2026
Uncategorized

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

ನಡ : ಮಣ್ಣಿನ ಹರಕೆಯ ಪುಣ್ಯಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಜೂ. 15 ನೇ ಶನಿವಾರ ಕ್ಷೇತ್ರದಲ್ಲಿ ಸ. ಉ. ಪ್ರಾ. ಶಾಲೆ ಕನ್ಯಾಡಿಯ 1 ರಿಂದ 8 ನೇ ತರಗತಿವರೆಗಿನ ಒಟ್ಟು 70 ಮಕ್ಕಳು ಹಾಗೂ ಸ. ಕಿ ಪ್ರಾ. ಶಾಲೆ ಸುರ್ಯದ 1 ರಿಂದ 5 ನೇ ತರಗತಿವರೆಗಿನ 32 ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಆನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ವಿತರಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಸಂದೀಪಾ ಸತೀಶ್ಚಂದ್ರ, ಸಂಗ್ರಾಮ್. ಎಸ್, ಶ್ರೀಮತಿ ಕೃತಿ ಸಂಗ್ರಾಮ್, ಧನಂಜಯ ಅಜ್ರಿ ನಡಗುತ್ತು, ಬಿ. ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಡಾ. ಪ್ರದೀಪ್ ನಾವೂರು, ವಕೀಲರಾದ ಶಶಿಕಿರಣ್ ಜೈನ್, ಸುರ್ಯಗುತ್ತು ಕುಟುಂಬಸ್ಥರು, ಅಧ್ಯಾಪಕರಾದ ಶ್ರೀಮತಿ ಜಯಾ, ಶ್ರೀಮತಿ ಶೋಭಾ, ಎಸ್. ಡಿ. ಎಂ. ಸಿ ಅಧ್ಯಕ್ಷರಾದ ನೊಣಯ್ಯ ಗೌಡ, ಶ್ರೀಮತಿ ಪದ್ಮಾವತಿ ಸುಕೇಶ್ ಪೂಜಾರಿ, ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲೆಯ ಪರವಾಗಿ ಅಧ್ಯಾಪಕರಾದ ವಿಕಾಸ್ ಇವರು ಕೃತ ಜ್ಞತೆಗಳನ್ನು ಸಲ್ಲಿಸಿದರು.

Related posts

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya
error: Content is protected !!