25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

ನಡ : ಮಣ್ಣಿನ ಹರಕೆಯ ಪುಣ್ಯಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಜೂ. 15 ನೇ ಶನಿವಾರ ಕ್ಷೇತ್ರದಲ್ಲಿ ಸ. ಉ. ಪ್ರಾ. ಶಾಲೆ ಕನ್ಯಾಡಿಯ 1 ರಿಂದ 8 ನೇ ತರಗತಿವರೆಗಿನ ಒಟ್ಟು 70 ಮಕ್ಕಳು ಹಾಗೂ ಸ. ಕಿ ಪ್ರಾ. ಶಾಲೆ ಸುರ್ಯದ 1 ರಿಂದ 5 ನೇ ತರಗತಿವರೆಗಿನ 32 ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಆನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ವಿತರಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಸಂದೀಪಾ ಸತೀಶ್ಚಂದ್ರ, ಸಂಗ್ರಾಮ್. ಎಸ್, ಶ್ರೀಮತಿ ಕೃತಿ ಸಂಗ್ರಾಮ್, ಧನಂಜಯ ಅಜ್ರಿ ನಡಗುತ್ತು, ಬಿ. ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಡಾ. ಪ್ರದೀಪ್ ನಾವೂರು, ವಕೀಲರಾದ ಶಶಿಕಿರಣ್ ಜೈನ್, ಸುರ್ಯಗುತ್ತು ಕುಟುಂಬಸ್ಥರು, ಅಧ್ಯಾಪಕರಾದ ಶ್ರೀಮತಿ ಜಯಾ, ಶ್ರೀಮತಿ ಶೋಭಾ, ಎಸ್. ಡಿ. ಎಂ. ಸಿ ಅಧ್ಯಕ್ಷರಾದ ನೊಣಯ್ಯ ಗೌಡ, ಶ್ರೀಮತಿ ಪದ್ಮಾವತಿ ಸುಕೇಶ್ ಪೂಜಾರಿ, ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲೆಯ ಪರವಾಗಿ ಅಧ್ಯಾಪಕರಾದ ವಿಕಾಸ್ ಇವರು ಕೃತ ಜ್ಞತೆಗಳನ್ನು ಸಲ್ಲಿಸಿದರು.

Related posts

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ: ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಗೌರವಾರ್ಪಣೆ

Suddi Udaya

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!