September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

ಬೆಳ್ತಂಗಡಿ: ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಟಿಕಿಸಿದ್ದಾರೆ.

ಮೊದಲೇ ಕೇಂದ್ರದ ಬಿಜೆಪಿ ಸರಕಾರದ ಬೆಲೆ ಏರಿಕೆಯ ದೋರಣೆಯಿಂದ ಬದುಕು ಸಾಗಿಸಲು ಕಷ್ಟ ಪಡುತ್ತಿರುವ ಜನರ ಮೇಲೆ ಮತ್ತಷ್ಟು ಬೆಲೆ ಏರಿಕೆಯ ಹೊರೆಯನ್ನು ಹೊರಿಸಿದ ರಾಜ್ಯ ಕಾಂಗ್ರೇಸ್ ಸರಕಾರಕ್ಕೆ ದಿಕ್ಕಾರ ಎಂದು ಹೇಳಿದ ಅವರು ಜನಸಾಮಾನ್ಯರ ಮೇಲೆ ಕಾಳಜಿ ಇಲ್ಲದೆ‌ ಸರ್ವಾದಿಕಾರಿಯಾಗಿ ಆಡಳಿತ ನಡೆಸುತ್ತಿದ್ದ, ವಿಪರೀತ ಬೆಲೆ ಏರಿಸಿ ಜನರ ರಕ್ತ ಹಿಂಡುತ್ತಿದ್ದ ಬಿಜೆಪಿಯ ಮಣ್ಣು ಮುಕ್ಕಿಸಿದ ಜನರು ನಾಳೆ ಕಾಂಗ್ರೇಸ್‌ಗೂ ತಕ್ಕ ಪಾಠ ಕಲಿಸಿಯೇ ಕಲಿಸುತ್ತಾರೆ ಎಂದರು.

ಈ ಬಂಡವಾಳಶಾಹಿ ಪರವಾದ ಬಿಜೆಪಿ ಕಾಂಗ್ರೇಸ್ ಪಕ್ಷಗಳಿಗೆ ಜನರ ಮತ ಬೇಕು ಆದರೆ ಅವರ ಬದುಕು ಬೇಡ ಎಂಬ ರೀತಿ ಗೆದ್ದ ಮೇಲೆ ಆಡಳಿತ ನಡೆಸುವ ಈ ಪಕ್ಷಗಳ ಆಡಳಿತದ ವಿರುದ್ದ ಸಮರ‌ದೀರ ಹೋರಾಟ ನಡೆಸಲು ಸಿಪಿಐಎಂ ಮುಂದಾಗುತ್ತದೆ ಎಂದರು. ಜನರ ಮೇಲೆ ನಿಜವಾದ ಕಾಳಜಿ ಇದ್ದದ್ದೇ ಆದರೆ , ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುವ ಪೆಟ್ರೋಲ್, ಡಿಸಿಲ್ ಮೇಲೆ‌ ಹಾಕಿದ ಮಾರಾಟ ತೆರಿಗೆಯನ್ನು ರಾಜ್ಯ ಸರಕಾರ ತಕ್ಷಣ ಹಿಂಪಡೆಯಬೇಕು ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಆಗ್ರಹಿಸುತ್ತದೆ ಎಂದರು.

Related posts

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya
error: Content is protected !!