22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

ಬೆಳ್ತಂಗಡಿ: ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಟಿಕಿಸಿದ್ದಾರೆ.

ಮೊದಲೇ ಕೇಂದ್ರದ ಬಿಜೆಪಿ ಸರಕಾರದ ಬೆಲೆ ಏರಿಕೆಯ ದೋರಣೆಯಿಂದ ಬದುಕು ಸಾಗಿಸಲು ಕಷ್ಟ ಪಡುತ್ತಿರುವ ಜನರ ಮೇಲೆ ಮತ್ತಷ್ಟು ಬೆಲೆ ಏರಿಕೆಯ ಹೊರೆಯನ್ನು ಹೊರಿಸಿದ ರಾಜ್ಯ ಕಾಂಗ್ರೇಸ್ ಸರಕಾರಕ್ಕೆ ದಿಕ್ಕಾರ ಎಂದು ಹೇಳಿದ ಅವರು ಜನಸಾಮಾನ್ಯರ ಮೇಲೆ ಕಾಳಜಿ ಇಲ್ಲದೆ‌ ಸರ್ವಾದಿಕಾರಿಯಾಗಿ ಆಡಳಿತ ನಡೆಸುತ್ತಿದ್ದ, ವಿಪರೀತ ಬೆಲೆ ಏರಿಸಿ ಜನರ ರಕ್ತ ಹಿಂಡುತ್ತಿದ್ದ ಬಿಜೆಪಿಯ ಮಣ್ಣು ಮುಕ್ಕಿಸಿದ ಜನರು ನಾಳೆ ಕಾಂಗ್ರೇಸ್‌ಗೂ ತಕ್ಕ ಪಾಠ ಕಲಿಸಿಯೇ ಕಲಿಸುತ್ತಾರೆ ಎಂದರು.

ಈ ಬಂಡವಾಳಶಾಹಿ ಪರವಾದ ಬಿಜೆಪಿ ಕಾಂಗ್ರೇಸ್ ಪಕ್ಷಗಳಿಗೆ ಜನರ ಮತ ಬೇಕು ಆದರೆ ಅವರ ಬದುಕು ಬೇಡ ಎಂಬ ರೀತಿ ಗೆದ್ದ ಮೇಲೆ ಆಡಳಿತ ನಡೆಸುವ ಈ ಪಕ್ಷಗಳ ಆಡಳಿತದ ವಿರುದ್ದ ಸಮರ‌ದೀರ ಹೋರಾಟ ನಡೆಸಲು ಸಿಪಿಐಎಂ ಮುಂದಾಗುತ್ತದೆ ಎಂದರು. ಜನರ ಮೇಲೆ ನಿಜವಾದ ಕಾಳಜಿ ಇದ್ದದ್ದೇ ಆದರೆ , ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುವ ಪೆಟ್ರೋಲ್, ಡಿಸಿಲ್ ಮೇಲೆ‌ ಹಾಕಿದ ಮಾರಾಟ ತೆರಿಗೆಯನ್ನು ರಾಜ್ಯ ಸರಕಾರ ತಕ್ಷಣ ಹಿಂಪಡೆಯಬೇಕು ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಆಗ್ರಹಿಸುತ್ತದೆ ಎಂದರು.

Related posts

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya
error: Content is protected !!