23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

ಬೆಳ್ತಂಗಡಿ: ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಟಿಕಿಸಿದ್ದಾರೆ.

ಮೊದಲೇ ಕೇಂದ್ರದ ಬಿಜೆಪಿ ಸರಕಾರದ ಬೆಲೆ ಏರಿಕೆಯ ದೋರಣೆಯಿಂದ ಬದುಕು ಸಾಗಿಸಲು ಕಷ್ಟ ಪಡುತ್ತಿರುವ ಜನರ ಮೇಲೆ ಮತ್ತಷ್ಟು ಬೆಲೆ ಏರಿಕೆಯ ಹೊರೆಯನ್ನು ಹೊರಿಸಿದ ರಾಜ್ಯ ಕಾಂಗ್ರೇಸ್ ಸರಕಾರಕ್ಕೆ ದಿಕ್ಕಾರ ಎಂದು ಹೇಳಿದ ಅವರು ಜನಸಾಮಾನ್ಯರ ಮೇಲೆ ಕಾಳಜಿ ಇಲ್ಲದೆ‌ ಸರ್ವಾದಿಕಾರಿಯಾಗಿ ಆಡಳಿತ ನಡೆಸುತ್ತಿದ್ದ, ವಿಪರೀತ ಬೆಲೆ ಏರಿಸಿ ಜನರ ರಕ್ತ ಹಿಂಡುತ್ತಿದ್ದ ಬಿಜೆಪಿಯ ಮಣ್ಣು ಮುಕ್ಕಿಸಿದ ಜನರು ನಾಳೆ ಕಾಂಗ್ರೇಸ್‌ಗೂ ತಕ್ಕ ಪಾಠ ಕಲಿಸಿಯೇ ಕಲಿಸುತ್ತಾರೆ ಎಂದರು.

ಈ ಬಂಡವಾಳಶಾಹಿ ಪರವಾದ ಬಿಜೆಪಿ ಕಾಂಗ್ರೇಸ್ ಪಕ್ಷಗಳಿಗೆ ಜನರ ಮತ ಬೇಕು ಆದರೆ ಅವರ ಬದುಕು ಬೇಡ ಎಂಬ ರೀತಿ ಗೆದ್ದ ಮೇಲೆ ಆಡಳಿತ ನಡೆಸುವ ಈ ಪಕ್ಷಗಳ ಆಡಳಿತದ ವಿರುದ್ದ ಸಮರ‌ದೀರ ಹೋರಾಟ ನಡೆಸಲು ಸಿಪಿಐಎಂ ಮುಂದಾಗುತ್ತದೆ ಎಂದರು. ಜನರ ಮೇಲೆ ನಿಜವಾದ ಕಾಳಜಿ ಇದ್ದದ್ದೇ ಆದರೆ , ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುವ ಪೆಟ್ರೋಲ್, ಡಿಸಿಲ್ ಮೇಲೆ‌ ಹಾಕಿದ ಮಾರಾಟ ತೆರಿಗೆಯನ್ನು ರಾಜ್ಯ ಸರಕಾರ ತಕ್ಷಣ ಹಿಂಪಡೆಯಬೇಕು ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಆಗ್ರಹಿಸುತ್ತದೆ ಎಂದರು.

Related posts

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!