22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

ಬೆಳ್ತಂಗಡಿ: ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಟಿಕಿಸಿದ್ದಾರೆ.

ಮೊದಲೇ ಕೇಂದ್ರದ ಬಿಜೆಪಿ ಸರಕಾರದ ಬೆಲೆ ಏರಿಕೆಯ ದೋರಣೆಯಿಂದ ಬದುಕು ಸಾಗಿಸಲು ಕಷ್ಟ ಪಡುತ್ತಿರುವ ಜನರ ಮೇಲೆ ಮತ್ತಷ್ಟು ಬೆಲೆ ಏರಿಕೆಯ ಹೊರೆಯನ್ನು ಹೊರಿಸಿದ ರಾಜ್ಯ ಕಾಂಗ್ರೇಸ್ ಸರಕಾರಕ್ಕೆ ದಿಕ್ಕಾರ ಎಂದು ಹೇಳಿದ ಅವರು ಜನಸಾಮಾನ್ಯರ ಮೇಲೆ ಕಾಳಜಿ ಇಲ್ಲದೆ‌ ಸರ್ವಾದಿಕಾರಿಯಾಗಿ ಆಡಳಿತ ನಡೆಸುತ್ತಿದ್ದ, ವಿಪರೀತ ಬೆಲೆ ಏರಿಸಿ ಜನರ ರಕ್ತ ಹಿಂಡುತ್ತಿದ್ದ ಬಿಜೆಪಿಯ ಮಣ್ಣು ಮುಕ್ಕಿಸಿದ ಜನರು ನಾಳೆ ಕಾಂಗ್ರೇಸ್‌ಗೂ ತಕ್ಕ ಪಾಠ ಕಲಿಸಿಯೇ ಕಲಿಸುತ್ತಾರೆ ಎಂದರು.

ಈ ಬಂಡವಾಳಶಾಹಿ ಪರವಾದ ಬಿಜೆಪಿ ಕಾಂಗ್ರೇಸ್ ಪಕ್ಷಗಳಿಗೆ ಜನರ ಮತ ಬೇಕು ಆದರೆ ಅವರ ಬದುಕು ಬೇಡ ಎಂಬ ರೀತಿ ಗೆದ್ದ ಮೇಲೆ ಆಡಳಿತ ನಡೆಸುವ ಈ ಪಕ್ಷಗಳ ಆಡಳಿತದ ವಿರುದ್ದ ಸಮರ‌ದೀರ ಹೋರಾಟ ನಡೆಸಲು ಸಿಪಿಐಎಂ ಮುಂದಾಗುತ್ತದೆ ಎಂದರು. ಜನರ ಮೇಲೆ ನಿಜವಾದ ಕಾಳಜಿ ಇದ್ದದ್ದೇ ಆದರೆ , ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುವ ಪೆಟ್ರೋಲ್, ಡಿಸಿಲ್ ಮೇಲೆ‌ ಹಾಕಿದ ಮಾರಾಟ ತೆರಿಗೆಯನ್ನು ರಾಜ್ಯ ಸರಕಾರ ತಕ್ಷಣ ಹಿಂಪಡೆಯಬೇಕು ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಆಗ್ರಹಿಸುತ್ತದೆ ಎಂದರು.

Related posts

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!