September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

ಬೆಳ್ತಂಗಡಿ: ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಟಿಕಿಸಿದ್ದಾರೆ.

ಮೊದಲೇ ಕೇಂದ್ರದ ಬಿಜೆಪಿ ಸರಕಾರದ ಬೆಲೆ ಏರಿಕೆಯ ದೋರಣೆಯಿಂದ ಬದುಕು ಸಾಗಿಸಲು ಕಷ್ಟ ಪಡುತ್ತಿರುವ ಜನರ ಮೇಲೆ ಮತ್ತಷ್ಟು ಬೆಲೆ ಏರಿಕೆಯ ಹೊರೆಯನ್ನು ಹೊರಿಸಿದ ರಾಜ್ಯ ಕಾಂಗ್ರೇಸ್ ಸರಕಾರಕ್ಕೆ ದಿಕ್ಕಾರ ಎಂದು ಹೇಳಿದ ಅವರು ಜನಸಾಮಾನ್ಯರ ಮೇಲೆ ಕಾಳಜಿ ಇಲ್ಲದೆ‌ ಸರ್ವಾದಿಕಾರಿಯಾಗಿ ಆಡಳಿತ ನಡೆಸುತ್ತಿದ್ದ, ವಿಪರೀತ ಬೆಲೆ ಏರಿಸಿ ಜನರ ರಕ್ತ ಹಿಂಡುತ್ತಿದ್ದ ಬಿಜೆಪಿಯ ಮಣ್ಣು ಮುಕ್ಕಿಸಿದ ಜನರು ನಾಳೆ ಕಾಂಗ್ರೇಸ್‌ಗೂ ತಕ್ಕ ಪಾಠ ಕಲಿಸಿಯೇ ಕಲಿಸುತ್ತಾರೆ ಎಂದರು.

ಈ ಬಂಡವಾಳಶಾಹಿ ಪರವಾದ ಬಿಜೆಪಿ ಕಾಂಗ್ರೇಸ್ ಪಕ್ಷಗಳಿಗೆ ಜನರ ಮತ ಬೇಕು ಆದರೆ ಅವರ ಬದುಕು ಬೇಡ ಎಂಬ ರೀತಿ ಗೆದ್ದ ಮೇಲೆ ಆಡಳಿತ ನಡೆಸುವ ಈ ಪಕ್ಷಗಳ ಆಡಳಿತದ ವಿರುದ್ದ ಸಮರ‌ದೀರ ಹೋರಾಟ ನಡೆಸಲು ಸಿಪಿಐಎಂ ಮುಂದಾಗುತ್ತದೆ ಎಂದರು. ಜನರ ಮೇಲೆ ನಿಜವಾದ ಕಾಳಜಿ ಇದ್ದದ್ದೇ ಆದರೆ , ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುವ ಪೆಟ್ರೋಲ್, ಡಿಸಿಲ್ ಮೇಲೆ‌ ಹಾಕಿದ ಮಾರಾಟ ತೆರಿಗೆಯನ್ನು ರಾಜ್ಯ ಸರಕಾರ ತಕ್ಷಣ ಹಿಂಪಡೆಯಬೇಕು ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಆಗ್ರಹಿಸುತ್ತದೆ ಎಂದರು.

Related posts

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya
error: Content is protected !!