25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ.

ಈಶ್ವರ್ ಮಲ್ಪೆ ಯವರ ಮೂಲಕ ತಮ್ಮ ತಂಡದ ಕ್ಯಾಪ್ಟನ್ ಸಂತೋಷ್ ಅವರಿಗೆ ಬಂದಿದ್ದ ಕರೆಗೆ ಸ್ಪಂದಿಸಿದ ತಂಡ ತಕ್ಷಣ ಮೃತದೇಹ ಶೋಧ ಕಾರ್ಯಕ್ಕೆ ಉಜಿರೆ-ಬೆಳಾಲು ಘಟಕ ಮುಂದಾಯಿತು. ಘಟಕ ಪ್ರತಿನಿಧಿ ರವೀಂದ್ರ, ಕ್ಯಾಪ್ಟನ್ ಸಂತೋಷ್, ಸಂದೇಶ್, ಸುಧೀರ್ ರವರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹ ಪತ್ತೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ದವರೆಗೆ ಶ್ರಮಿಸಿ ಕೊನೆಗೆ ಯಶಸ್ವಿಯಾಯಿತು.. ಈ ವೇಳೆ ಗ್ರಾ. ಯೋಜನೆಯ ಕಳಸದ ಯೋಜನಾಧಿಕಾರಿ ಹಾಗೂ ಕಳಸದ ಶೌರ್ಯ ಟೀಮ್ ಪೂರಕ ಸಹಕಾರ ನೀಡಿದರು.

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!