April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಈದ್ ಸಂಭ್ರಮ
ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಅಲ್‌ಹಾ (ಬಕ್ರೀದ್) ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ಪ್ರಯುಕ್ತ ಪುರುಷರು ಮತ್ತು ಮಕ್ಕಳು ಬೆಳಗ್ಗೆಯೇ ಮಸ್ಜಿದ್ ಗಳಿಗೆ ತೆರಳಿ ಬಕ್ರೀದ್ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು. ಬಲಿ ಪೆರುನಾಳ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.


ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಅಲ್‌ಹಾ (ಬಕ್ರೀದ್) ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ತಾಲೂಕು ಪೊಲೀಸ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya
error: Content is protected !!