July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಈದ್ ಸಂಭ್ರಮ
ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಅಲ್‌ಹಾ (ಬಕ್ರೀದ್) ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ಪ್ರಯುಕ್ತ ಪುರುಷರು ಮತ್ತು ಮಕ್ಕಳು ಬೆಳಗ್ಗೆಯೇ ಮಸ್ಜಿದ್ ಗಳಿಗೆ ತೆರಳಿ ಬಕ್ರೀದ್ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು. ಬಲಿ ಪೆರುನಾಳ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.


ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಅಲ್‌ಹಾ (ಬಕ್ರೀದ್) ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ತಾಲೂಕು ಪೊಲೀಸ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya
error: Content is protected !!