ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಈದ್ ಸಂಭ್ರಮ
ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಅಲ್‌ಹಾ (ಬಕ್ರೀದ್) ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ಪ್ರಯುಕ್ತ ಪುರುಷರು ಮತ್ತು ಮಕ್ಕಳು ಬೆಳಗ್ಗೆಯೇ ಮಸ್ಜಿದ್ ಗಳಿಗೆ ತೆರಳಿ ಬಕ್ರೀದ್ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು. ಬಲಿ ಪೆರುನಾಳ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.


ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಅಲ್‌ಹಾ (ಬಕ್ರೀದ್) ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ತಾಲೂಕು ಪೊಲೀಸ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಮಚ್ಚಿನದಲ್ಲಿ ಚಿರತೆ ಓಡಾಟ: ಜನರಲ್ಲಿ ಆತಂಕ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya
error: Content is protected !!