July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

ಪಡುಮಲೆ: ತುಳುನಾಡಿನ ಸತ್ಯೋದ ಸೀಮೆಯೆಂದು ಹೆಸರು ಪಡೆದಿರುವ ಕುಂಬ್ಳೆ ಸೀಮೆಯಾದ್ಯಂತ ದ್ಯೆವ ನರ್ತನ ಸೇವೆ ಮಾಡುತ್ತಿರುವ ಪಡುಮಲೆ ಪರವನ್ ಕುಟುಂಬಸ್ಥರ ತರವಾಡು ಮನೆಯಲ್ಲಿ ವಾರ್ಷಿಕ ತಂಬಿಲ ಜೂ.16 ರಂದು ರಾತ್ರಿ ನಡೆಯಿತು. ಊರ ಪರವೂರಿನಲ್ಲಿರುವ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರಾದ ದ್ಯೆವ ನರ್ತಕ ಡಾ.ರವೀಶ್ ಪಡುಮಲೆ ಯವರನ್ನು ವಿಶ್ವನಾಥ ಪಡುಮಲೆಯವರು ಮತ್ತು ಕುಟುಂಬಸ್ಥರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರವೀಶ್ ಪಡುಮಲೆ ಯವರು ನಾವೆಲ್ಲರೂ ನಮ್ಮ ಹಿರಿಯರಿಂದ ಬಂದ ದ್ಯೆವ ನರ್ತನ ಸೇವೆಯನ್ನು ನಿಷ್ಟೆಯಲ್ಲಿ, ಪ್ರಾಮಾಣಿಕವಾಗಿ ಮುಂದುವರಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಮೂಲ ಕಟ್ಟು ಕಟ್ಟಳೆಯನ್ನು ಉಳಿಸೋಣ ಎಂದು ವಿನಂತಿಸಿಕೊಂಡರು. ಉಪನ್ಯಾಸಕ ಜಗನ್ನಾಥ ಕೊಣಾಜೆ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಪೂವಪ್ಪ ಕೊಂಬಾರು, ಶೇಖರ ವಿಟ್ಲ, ಚೆನ್ನಪ್ಪ ಇಚಿಲಂಪಾಡಿ, ಸುಬ್ಬ ನೆಟ್ಟಣ, ವಾಸು ಪಡುಮಲೆ, ನಾಗಪ್ಪ ಕೊಣಾಜೆ, ಜಿನಪ್ಪ ಮರಕಡ, ಶೀನ ಇಚಿಲಂಪಾಡಿ, ಕೊರಗಪ್ಪ ನರಿಮೊಗೆರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!