September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ‌ ಸ್ನೇಹ, ಶಾಂತಿ, ಸಮಾಧಾನ, ತ್ಯಾಗ, ಬಲಿದಾನ, ಪರಸ್ಪರ ಸಹಾಯದೊಂದಿಗೆ ಮಾನವ ಸೌಹಾರ್ದ ಹಾಗೂ ವಿಶ್ವ ಭಾತೃತ್ವದ ಮಹೋನ್ನತ ಸಂದೇಶಗಳನ್ನು ಸಾರಿದರು. ಬಕ್ರೀದ್ ಸಂದೇಶ ಭಾಷಣ ಮಾಡಿ ಈದುಲ್ ಅಝಾ ನಮಾಝ್ ಮಾಡಿ ಪ್ರಾರ್ಥನೆ ನೆರವೇರಿಸಿದರು.

ಈ ವೇಳೆ ಹಿರಿಯರು, ಮಕ್ಕಳು ಪರಸ್ಪರ ಆಲಿಂಗನದ ಮೂಲಕ ‌ಶುಭಾಶಯ ವಿನಿಮಯ ಮಾಡಿಕೊಂಡರು. ರಿಫಾಯ್ಯಾ ಮಸೀದಿ ಆಡಳಿತ ಕಮಿಟಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು ಮತ್ತು ಪದಾಧಿಕಾರಿಗಳು, ಮುರ್ಷಿದುಲ್ ಆನಾಂ ಯಂಗ್ ಮೆನ್ಸ್ ‌ಪದಾಧಿಕಾರಿಗಳು ಮತ್ತು ಜಮಾತರು ಭಾಗಿಯಾಗಿದ್ದರು.

Related posts

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya
error: Content is protected !!