37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

ಉಜಿರೆ : ಉಜಿರೆಯ ಎಸ್.ಡಿ.ಎಮ್ ಡಿ.ಎಡ್ ಕಾಲೇಜಿನ ಸಭಾಂಗಣದಲ್ಲಿ ಎಸ್.ಡಿ.ಎಮ್ ಶಾಲಾ ವಿದ್ಯಾರ್ಥಿಗಳಿಗೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಸ್ತುಸಂಗ್ರಹಾಲಯದ ‘ಮ್ಯೂಸಿಯಂ ಆನ್ ವೀಲ್’ ಜೊತೆಗೆ ‘ಒರಿಗಾಮಿ’ ಕಾರ್ಯಗಾರ ಜೂ17ರಂದು ನಡೆಯಿತು.

ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಶುಭನುಡಿಗಳನ್ನಾಡಿದರು.

‘ಮ್ಯೂಸಿಯಂ ಆನ್ ವೀಲ್’ ನ ಸಹಾಯಕ ಶಿಕ್ಷಣ ಸಹಾಯಕರಾದ ಋತುಜ ಹಾಗೂ ಕಶ್ಯಪಿ ಕಾರ್ಯಗಾರದ ಕುರಿತು ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಶಾಲಾ ವಿದ್ಯಾರ್ಥಿಗಳಿಗೆ ಬಣ್ಣ ಕಾಗದಗಳಿಂದ ಒರಿಗಾಮಿ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು.

ವೇದಿಕೆಯಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ, ಮ್ಯೂಸಿಯಂ ಆನ್ ವೀಲ್ ನ ಶಿಕ್ಷಣ ಸಹಾಯಕರಾದ ಚಿನ್ಮಯಿ, ಸಹಾಯಕ ಶಿಕ್ಷಣ ಸಹಾಯಕರಾದ ಕಶ್ಯಪಿ, ಋತುಜ ಹಾಗೂ ಚಟುವಟಿಕೆ ಸಹಾಯಕರಾದ ದೇವೇಶ್ ಮತ್ತು ಅಮಿತ್, ಮ್ಯೂಸಿಯಂ ಬಸ್ ಚಾಲಕ ಶಿವಾಜಿ ತಾವರೆ ಉಪಸ್ಥಿತರಿದ್ದರು.

ಕಾರ್ಯಗಾರದಲ್ಲಿ ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕಿಯರಾದ ಕಲ್ಯಾಣಿ ನಿರೂಪಿಸಿ, ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ ಜಿ ಸ್ವಾಗತಿಸಿ, ಶಿಕ್ಷಕ ಜಾರ್ಜ್ ವಂದಿಸಿದರು.

Related posts

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya
error: Content is protected !!