September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

ಉಜಿರೆ : ಉಜಿರೆಯ ಎಸ್.ಡಿ.ಎಮ್ ಡಿ.ಎಡ್ ಕಾಲೇಜಿನ ಸಭಾಂಗಣದಲ್ಲಿ ಎಸ್.ಡಿ.ಎಮ್ ಶಾಲಾ ವಿದ್ಯಾರ್ಥಿಗಳಿಗೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಸ್ತುಸಂಗ್ರಹಾಲಯದ ‘ಮ್ಯೂಸಿಯಂ ಆನ್ ವೀಲ್’ ಜೊತೆಗೆ ‘ಒರಿಗಾಮಿ’ ಕಾರ್ಯಗಾರ ಜೂ17ರಂದು ನಡೆಯಿತು.

ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಶುಭನುಡಿಗಳನ್ನಾಡಿದರು.

‘ಮ್ಯೂಸಿಯಂ ಆನ್ ವೀಲ್’ ನ ಸಹಾಯಕ ಶಿಕ್ಷಣ ಸಹಾಯಕರಾದ ಋತುಜ ಹಾಗೂ ಕಶ್ಯಪಿ ಕಾರ್ಯಗಾರದ ಕುರಿತು ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಶಾಲಾ ವಿದ್ಯಾರ್ಥಿಗಳಿಗೆ ಬಣ್ಣ ಕಾಗದಗಳಿಂದ ಒರಿಗಾಮಿ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು.

ವೇದಿಕೆಯಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ, ಮ್ಯೂಸಿಯಂ ಆನ್ ವೀಲ್ ನ ಶಿಕ್ಷಣ ಸಹಾಯಕರಾದ ಚಿನ್ಮಯಿ, ಸಹಾಯಕ ಶಿಕ್ಷಣ ಸಹಾಯಕರಾದ ಕಶ್ಯಪಿ, ಋತುಜ ಹಾಗೂ ಚಟುವಟಿಕೆ ಸಹಾಯಕರಾದ ದೇವೇಶ್ ಮತ್ತು ಅಮಿತ್, ಮ್ಯೂಸಿಯಂ ಬಸ್ ಚಾಲಕ ಶಿವಾಜಿ ತಾವರೆ ಉಪಸ್ಥಿತರಿದ್ದರು.

ಕಾರ್ಯಗಾರದಲ್ಲಿ ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕಿಯರಾದ ಕಲ್ಯಾಣಿ ನಿರೂಪಿಸಿ, ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ ಜಿ ಸ್ವಾಗತಿಸಿ, ಶಿಕ್ಷಕ ಜಾರ್ಜ್ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಐರನ್ ರೋಡ್ರಿಗಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya
error: Content is protected !!