23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ.

ಈಶ್ವರ್ ಮಲ್ಪೆ ಯವರ ಮೂಲಕ ತಮ್ಮ ತಂಡದ ಕ್ಯಾಪ್ಟನ್ ಸಂತೋಷ್ ಅವರಿಗೆ ಬಂದಿದ್ದ ಕರೆಗೆ ಸ್ಪಂದಿಸಿದ ತಂಡ ತಕ್ಷಣ ಮೃತದೇಹ ಶೋಧ ಕಾರ್ಯಕ್ಕೆ ಉಜಿರೆ-ಬೆಳಾಲು ಘಟಕ ಮುಂದಾಯಿತು. ಘಟಕ ಪ್ರತಿನಿಧಿ ರವೀಂದ್ರ, ಕ್ಯಾಪ್ಟನ್ ಸಂತೋಷ್, ಸಂದೇಶ್, ಸುಧೀರ್ ರವರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹ ಪತ್ತೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ದವರೆಗೆ ಶ್ರಮಿಸಿ ಕೊನೆಗೆ ಯಶಸ್ವಿಯಾಯಿತು.. ಈ ವೇಳೆ ಗ್ರಾ. ಯೋಜನೆಯ ಕಳಸದ ಯೋಜನಾಧಿಕಾರಿ ಹಾಗೂ ಕಳಸದ ಶೌರ್ಯ ಟೀಮ್ ಪೂರಕ ಸಹಕಾರ ನೀಡಿದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಕಳೆಂಜ: ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ ಹಾಗೂ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!