23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಈದ್ ಸಂಭ್ರಮ
ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಅಲ್‌ಹಾ (ಬಕ್ರೀದ್) ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ಪ್ರಯುಕ್ತ ಪುರುಷರು ಮತ್ತು ಮಕ್ಕಳು ಬೆಳಗ್ಗೆಯೇ ಮಸ್ಜಿದ್ ಗಳಿಗೆ ತೆರಳಿ ಬಕ್ರೀದ್ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು. ಬಲಿ ಪೆರುನಾಳ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.


ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಅಲ್‌ಹಾ (ಬಕ್ರೀದ್) ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ತಾಲೂಕು ಪೊಲೀಸ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಧರ್ಮಸ್ಥಳ ನೇತ್ರಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ “ಯಾತ್ರಾ ಆತಿಥ್ಯ” ಲೋಕಾರ್ಪಣೆ

Suddi Udaya
error: Content is protected !!