23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

ಪಡುಮಲೆ: ತುಳುನಾಡಿನ ಸತ್ಯೋದ ಸೀಮೆಯೆಂದು ಹೆಸರು ಪಡೆದಿರುವ ಕುಂಬ್ಳೆ ಸೀಮೆಯಾದ್ಯಂತ ದ್ಯೆವ ನರ್ತನ ಸೇವೆ ಮಾಡುತ್ತಿರುವ ಪಡುಮಲೆ ಪರವನ್ ಕುಟುಂಬಸ್ಥರ ತರವಾಡು ಮನೆಯಲ್ಲಿ ವಾರ್ಷಿಕ ತಂಬಿಲ ಜೂ.16 ರಂದು ರಾತ್ರಿ ನಡೆಯಿತು. ಊರ ಪರವೂರಿನಲ್ಲಿರುವ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರಾದ ದ್ಯೆವ ನರ್ತಕ ಡಾ.ರವೀಶ್ ಪಡುಮಲೆ ಯವರನ್ನು ವಿಶ್ವನಾಥ ಪಡುಮಲೆಯವರು ಮತ್ತು ಕುಟುಂಬಸ್ಥರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರವೀಶ್ ಪಡುಮಲೆ ಯವರು ನಾವೆಲ್ಲರೂ ನಮ್ಮ ಹಿರಿಯರಿಂದ ಬಂದ ದ್ಯೆವ ನರ್ತನ ಸೇವೆಯನ್ನು ನಿಷ್ಟೆಯಲ್ಲಿ, ಪ್ರಾಮಾಣಿಕವಾಗಿ ಮುಂದುವರಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಮೂಲ ಕಟ್ಟು ಕಟ್ಟಳೆಯನ್ನು ಉಳಿಸೋಣ ಎಂದು ವಿನಂತಿಸಿಕೊಂಡರು. ಉಪನ್ಯಾಸಕ ಜಗನ್ನಾಥ ಕೊಣಾಜೆ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಪೂವಪ್ಪ ಕೊಂಬಾರು, ಶೇಖರ ವಿಟ್ಲ, ಚೆನ್ನಪ್ಪ ಇಚಿಲಂಪಾಡಿ, ಸುಬ್ಬ ನೆಟ್ಟಣ, ವಾಸು ಪಡುಮಲೆ, ನಾಗಪ್ಪ ಕೊಣಾಜೆ, ಜಿನಪ್ಪ ಮರಕಡ, ಶೀನ ಇಚಿಲಂಪಾಡಿ, ಕೊರಗಪ್ಪ ನರಿಮೊಗೆರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya
error: Content is protected !!