September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

ಪಡುಮಲೆ: ತುಳುನಾಡಿನ ಸತ್ಯೋದ ಸೀಮೆಯೆಂದು ಹೆಸರು ಪಡೆದಿರುವ ಕುಂಬ್ಳೆ ಸೀಮೆಯಾದ್ಯಂತ ದ್ಯೆವ ನರ್ತನ ಸೇವೆ ಮಾಡುತ್ತಿರುವ ಪಡುಮಲೆ ಪರವನ್ ಕುಟುಂಬಸ್ಥರ ತರವಾಡು ಮನೆಯಲ್ಲಿ ವಾರ್ಷಿಕ ತಂಬಿಲ ಜೂ.16 ರಂದು ರಾತ್ರಿ ನಡೆಯಿತು. ಊರ ಪರವೂರಿನಲ್ಲಿರುವ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರಾದ ದ್ಯೆವ ನರ್ತಕ ಡಾ.ರವೀಶ್ ಪಡುಮಲೆ ಯವರನ್ನು ವಿಶ್ವನಾಥ ಪಡುಮಲೆಯವರು ಮತ್ತು ಕುಟುಂಬಸ್ಥರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರವೀಶ್ ಪಡುಮಲೆ ಯವರು ನಾವೆಲ್ಲರೂ ನಮ್ಮ ಹಿರಿಯರಿಂದ ಬಂದ ದ್ಯೆವ ನರ್ತನ ಸೇವೆಯನ್ನು ನಿಷ್ಟೆಯಲ್ಲಿ, ಪ್ರಾಮಾಣಿಕವಾಗಿ ಮುಂದುವರಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಮೂಲ ಕಟ್ಟು ಕಟ್ಟಳೆಯನ್ನು ಉಳಿಸೋಣ ಎಂದು ವಿನಂತಿಸಿಕೊಂಡರು. ಉಪನ್ಯಾಸಕ ಜಗನ್ನಾಥ ಕೊಣಾಜೆ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಪೂವಪ್ಪ ಕೊಂಬಾರು, ಶೇಖರ ವಿಟ್ಲ, ಚೆನ್ನಪ್ಪ ಇಚಿಲಂಪಾಡಿ, ಸುಬ್ಬ ನೆಟ್ಟಣ, ವಾಸು ಪಡುಮಲೆ, ನಾಗಪ್ಪ ಕೊಣಾಜೆ, ಜಿನಪ್ಪ ಮರಕಡ, ಶೀನ ಇಚಿಲಂಪಾಡಿ, ಕೊರಗಪ್ಪ ನರಿಮೊಗೆರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ಬೈಂದೂರಿನಲ್ಲಿ ಶ್ರೀ ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಭೇಟಿ

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya
error: Content is protected !!