23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

ಪಡುಮಲೆ: ತುಳುನಾಡಿನ ಸತ್ಯೋದ ಸೀಮೆಯೆಂದು ಹೆಸರು ಪಡೆದಿರುವ ಕುಂಬ್ಳೆ ಸೀಮೆಯಾದ್ಯಂತ ದ್ಯೆವ ನರ್ತನ ಸೇವೆ ಮಾಡುತ್ತಿರುವ ಪಡುಮಲೆ ಪರವನ್ ಕುಟುಂಬಸ್ಥರ ತರವಾಡು ಮನೆಯಲ್ಲಿ ವಾರ್ಷಿಕ ತಂಬಿಲ ಜೂ.16 ರಂದು ರಾತ್ರಿ ನಡೆಯಿತು. ಊರ ಪರವೂರಿನಲ್ಲಿರುವ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರಾದ ದ್ಯೆವ ನರ್ತಕ ಡಾ.ರವೀಶ್ ಪಡುಮಲೆ ಯವರನ್ನು ವಿಶ್ವನಾಥ ಪಡುಮಲೆಯವರು ಮತ್ತು ಕುಟುಂಬಸ್ಥರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರವೀಶ್ ಪಡುಮಲೆ ಯವರು ನಾವೆಲ್ಲರೂ ನಮ್ಮ ಹಿರಿಯರಿಂದ ಬಂದ ದ್ಯೆವ ನರ್ತನ ಸೇವೆಯನ್ನು ನಿಷ್ಟೆಯಲ್ಲಿ, ಪ್ರಾಮಾಣಿಕವಾಗಿ ಮುಂದುವರಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಮೂಲ ಕಟ್ಟು ಕಟ್ಟಳೆಯನ್ನು ಉಳಿಸೋಣ ಎಂದು ವಿನಂತಿಸಿಕೊಂಡರು. ಉಪನ್ಯಾಸಕ ಜಗನ್ನಾಥ ಕೊಣಾಜೆ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಪೂವಪ್ಪ ಕೊಂಬಾರು, ಶೇಖರ ವಿಟ್ಲ, ಚೆನ್ನಪ್ಪ ಇಚಿಲಂಪಾಡಿ, ಸುಬ್ಬ ನೆಟ್ಟಣ, ವಾಸು ಪಡುಮಲೆ, ನಾಗಪ್ಪ ಕೊಣಾಜೆ, ಜಿನಪ್ಪ ಮರಕಡ, ಶೀನ ಇಚಿಲಂಪಾಡಿ, ಕೊರಗಪ್ಪ ನರಿಮೊಗೆರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಸಂಸ್ಥೆಯಲ್ಲಿ ಲಕ್ಷ್ಮೀ ಪೂಜೆ-ವಾಹನ ಪೂಜೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

Suddi Udaya

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!