24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

ಗುರಿಪಳ್ಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಜಯನಗರ, ಗುರಿಪಳ್ಳ ಇದರ ಸಂಯುಕ್ತ ಆಶ್ರಯದಲ್ಲಿ 21ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮವು ಶ್ರೀ ಗುರುರಾಘವೇಂದ್ರ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಸಾಮೂಹಿಕವಾಗಿ ವ್ರತದಾರಿಗಳು ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯಲ್ಲಿ ಭಾಗವಹಿಸಿದರು. ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಗುರಿಪಳ್ಳದ ಭಜಕರು ಕುಣಿತ ಭಜನಾ ಕಾರ್ಯಕ್ರಮವನ್ನು ನೆರವೇರಿಸಿದರು.

ದೀಪ ಬೆಳಗಿಸುವ ಮೂಲಕ ಪದಗ್ರಹಣದ ಉದ್ಘಾಟನೆಯನ್ನು ಮಾಡಿದ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆಯ ಸಂಚಾಲಕ ನಾಮ್ ದೇವ್ ರಾವ್ ರವರು 1982 ರಲ್ಲಿ ಹುಟ್ಟಿಕೊಂಡ ಯೋಜನೆಯು ಪ್ರತಿಯೊಬ್ಬರ ಬದುಕಿನಲ್ಲಿ ತನ್ನ ಕೃಷಿಯಿಂದ ಹಿಡಿದು ಮಕ್ಕಳ ಉನ್ನತ ಶಿಕ್ಷಣ ತನ್ನ ಮನೆಯ ಅಭಿವೃದ್ಧಿ ಹಾಗೂ ದುಶ್ಚಟ ಮುಕ್ತ ಸಮಾಜವನ್ನು ನಿರ್ಮಿಸುವ ಕ್ರಾಂತಿಯೊಂದಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಕನಸು ಗ್ರಾಮೀಣ ಜನರ ಅಭಿವೃದ್ಧಿಯ ಮೂಲಕವಾಗಿ ನನಸಾಗಿದೆ ಇದರ ಮೂಲಕ ಯೋಜನೆಯ ರಾಜ್ಯವನ್ನು ಹೊರತುಪಡಿಸಿ ದೇಶದ ಇತಿಹಾಸದಲ್ಲಿಯೇ ಒಂದು ಹೊಸ ಬಾಷ್ಯವನ್ನು ಬರೆದಿದೆ ಎಂದು ತಿಳಿಸಿದರು. 21 ವರುಷಗಳಿಂದ ಶ್ರೀ ಗುರು ರಾಘವೇಂದ್ರ ಭಜನ ಮಂಡಳಿ ನಿರಂತರವಾದ ಪೂಜೆ ಸಂಸ್ಕಾರ ಹಿತ ಬದುಕಿಗೆ ಈ ಭಜನಾ ಮಂಡಳಿಯು ಊರಿಗೆ ಆದಾರವಾಗಿದ್ದು, ಇಲ್ಲಿಯ ಕುಣಿಕ ಭಜನಾ ತಂಡವು ಇದೀಗ ಜಿಲ್ಲೆಗೆ ಅತ್ಯುತ್ತಮ ಭಜನಾ ತಂಡದಲ್ಲಿ ಒಂದಾಗಿದೆ ಎಂದು ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್ ರವರು ಯೋಜನೆಯ ಕಾರ್ಯಕ್ರಮಗಳು ಗ್ರಾಮೀಣ ಮಟ್ಟದಲ್ಲಿ ಅತ್ಯುತ್ತಮವಾಗಿ ಅನುಷ್ಠಾನಿಸಲು ಪ್ರತಿಯೊಬ್ಬರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸುತ್ತಾ ಯೋಜನೆಗೆ ಎಲ್ಲ ಪಾಲುದಾರ ಸದಸ್ಯರು ಊರಿನವರು ಉತ್ತಮವಾದ ಸಹಕಾರವನ್ನು ನೀಡುತ್ತಿದ್ದು ಇನ್ನು ಮುಂದಕ್ಕೂ ಕೂಡ ಇನ್ನೂ ಹೆಚ್ಚಿನ ಸಹಕಾರವನ್ನು ನೀಡಿದಾಗ ಇನ್ನು ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದರು.

ಹೆಬ್ರಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಮತಿ ಲೀಲಾವತಿಯವರು ಪ್ರಥಮದಲ್ಲಿ ನಾನು ಇದೇ ಗ್ರಾಮದಲ್ಲಿ ಸೇವಾ ನಿರತನಾಗಿ ಸೇರ್ಪಡೆಗೊಂಡು ಯೋಜನೆಯ ಮೂಲಕವಾಗಿ ಸೇವೆಯನ್ನು ನೀಡಲು ನನಗೆ ತಾಯಿಯಂತೆ ಪ್ರೋತ್ಸಾಹಿಸಿದ ಊರು ಇದು, ಯೋಜನೆಯಲ್ಲಿ ದೂರದ ಊರಿನಲ್ಲಿಯೂ ಕೂಡ ನನಗೆ ಕೆಲಸವನ್ನು ಮಾಡಲು ನೀವು ಪ್ರಥಮದಲ್ಲಿ ಪ್ರೋತ್ಸಾಹಿಸಿದ ಪ್ರೋತ್ಸಾಹವೇ ಕಾರಣವಾಗಿದೆ ಎಂದು ತಿಳಿಸಿದರು,

ಭಜನಾ ಮಂದಿರದ ಅಧ್ಯಕ್ಷರಾಗಿ ಅದ್ಭುತವಾದ ಕುಣಿತ ಭಜನಾ ತಂಡವನ್ನು ರಚಿಸಿ ಹಾಗೂ ಭಜನಾ ಮಂಡಳಿಯ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿರುವ ಭಜನಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಬೇಬಿ ಉಮೇಶ್ ಹಾಗೂ ಯೋಜನೆಯ ಸೇವಾಪ್ರತಿನಿಧಿಯಾಗಿ 5 ವರ್ಷ ಗುರಿಪಳ್ಳದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದ ಶ್ರೀಮತಿ ಸುಮಾ ಸಂದೀಪ್ ಇವರನ್ನು ಸನ್ಮಾನಿಸಲಾಯಿತು,

ವೇದಿಕೆಯಲ್ಲಿ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಪ್ರಸಾದ್ ಕುಮಾರ್ ನೂತನ ಅಧ್ಯಕ್ಷರಿಗೆ ಎಲೆ ಅಡಿಕೆ ಹಸ್ತಾಂತರಿಸುವ ಮೂಲಕ ಪದಗ್ರಹಣ ನೆರವೇರಿಸಿ ಮಾತನಾಡಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು, ನೂತನ ಅಧ್ಯಕ್ಷರಾದ ಗುರುರಾಜ್ ರವರು ಎಲ್ಲರ ಸಹಕಾರ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀಮತಿ ಬೇಬಿ ಉಮೇಶ್ ರವರು ಮಾತನಾಡಿ ಭಜನಾ ಮಂಡಳಿಯ ಸಾಧನೆಯಲ್ಲಿ ನನಗೆ ಸಹಕಾರ ನೀಡಿದ ಎಲ್ಲರನ್ನೂ ಸ್ಮರಿಸಿ ಭಜನಾಮಂದಿರದ ಅಭಿವೃದ್ಧಿಗೆ ಊರವರು ಇನ್ನಷ್ಟು ಸಹಕಾರ ನೀಡಬೇಕು ಎಂದರು.
ವೇದಿಕೆಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಗೀತಾ ಮಮತಾ ಸುಮಿತಾ ಸುಧಾ ಬಾಬು ಬಂಗೇರ ಚಂದ್ರಕಲಾ ಚಿತ್ರ ನಾರಾಯಣ ಗೌಡ ಉಪಸ್ಥಿತರಿದ್ದರು,

ಭಜನಾ ತಂಡದ ಮಕ್ಕಳು ಪ್ರಾರ್ಥನೆ ನೆರವೇರಿಸಿ, ಒಕ್ಕೂಟದ ಮಾಜಿ ಅಧ್ಯಕ್ಷ ಯಶೋಧರ ಗೌಡ ಸ್ವಾಗತಿಸಿ, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಚಂದ್ರಕಲಾ ಧನ್ಯವಾದವಿತ್ತರು ,ಕಾರ್ಯಕ್ರಮದ ನಿರೂಪಣೆಯನ್ನು ಯೋಜನೆಯ ಕೃಷಿ ಅಧಿಕಾರಿಗಳಾದ ರಾಮ್ ಕುಮಾರ್ ಹಾಗೂ ಮೇಲ್ವಿಚಾರಕರಾದ ಶ್ರೀಮತಿ ಉಷಾ ರವರು ಒಕ್ಕೂಟದ ಯೋಜನೆಯ ಕಾರ್ಯಕ್ರಮದ ಸಾಧನೆಯ ವರದಿಯನ್ನು ಮಂಡಿಸಿದರು, ಕಾರ್ಯಕ್ರಮದ ನಂತರ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು..

ಈ ಸಂದರ್ಭದಲ್ಲಿ ಹರೀಶ್ ಗೌಡ, ರಘುನಾಥ ಪೂಜಾರಿ, ಕಲಾವತಿ ಶೆಟ್ಟಿಗಾರ್, ರಾಮಣ್ಣ ಪೂಜಾರಿ, ಅನಿತಾ ಕೊಡೆಕಲ್, ಗೀತಾ ವಿ ನಾಯ್ಕ್, ಸುಭಾಷ್ ಜಯನಗರ, ಕುಶಾಲಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!