ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಈದ್ ಸಂಭ್ರಮ
ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಅಲ್‌ಹಾ (ಬಕ್ರೀದ್) ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ಪ್ರಯುಕ್ತ ಪುರುಷರು ಮತ್ತು ಮಕ್ಕಳು ಬೆಳಗ್ಗೆಯೇ ಮಸ್ಜಿದ್ ಗಳಿಗೆ ತೆರಳಿ ಬಕ್ರೀದ್ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು. ಬಲಿ ಪೆರುನಾಳ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.


ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಅಲ್‌ಹಾ (ಬಕ್ರೀದ್) ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ತಾಲೂಕು ಪೊಲೀಸ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಸಾರಿಗೆ ಬಸ್‌ನಲ್ಲಿ ಹೆಚ್ಚಿದ ಜನಸಂದಣಿ; ವಿದ್ಯಾರ್ಥಿಗಳ, ಉದ್ಯೋಗಿಗಳ ಪರದಾಟ; ಹೆಚ್ಚುವರಿ ಬಸ್‌ಗೆ ಪ್ರಯಾಣಿಕರ ಆಗ್ರಹ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!