25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

ಪಡುಮಲೆ: ತುಳುನಾಡಿನ ಸತ್ಯೋದ ಸೀಮೆಯೆಂದು ಹೆಸರು ಪಡೆದಿರುವ ಕುಂಬ್ಳೆ ಸೀಮೆಯಾದ್ಯಂತ ದ್ಯೆವ ನರ್ತನ ಸೇವೆ ಮಾಡುತ್ತಿರುವ ಪಡುಮಲೆ ಪರವನ್ ಕುಟುಂಬಸ್ಥರ ತರವಾಡು ಮನೆಯಲ್ಲಿ ವಾರ್ಷಿಕ ತಂಬಿಲ ಜೂ.16 ರಂದು ರಾತ್ರಿ ನಡೆಯಿತು. ಊರ ಪರವೂರಿನಲ್ಲಿರುವ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರಾದ ದ್ಯೆವ ನರ್ತಕ ಡಾ.ರವೀಶ್ ಪಡುಮಲೆ ಯವರನ್ನು ವಿಶ್ವನಾಥ ಪಡುಮಲೆಯವರು ಮತ್ತು ಕುಟುಂಬಸ್ಥರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರವೀಶ್ ಪಡುಮಲೆ ಯವರು ನಾವೆಲ್ಲರೂ ನಮ್ಮ ಹಿರಿಯರಿಂದ ಬಂದ ದ್ಯೆವ ನರ್ತನ ಸೇವೆಯನ್ನು ನಿಷ್ಟೆಯಲ್ಲಿ, ಪ್ರಾಮಾಣಿಕವಾಗಿ ಮುಂದುವರಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಮೂಲ ಕಟ್ಟು ಕಟ್ಟಳೆಯನ್ನು ಉಳಿಸೋಣ ಎಂದು ವಿನಂತಿಸಿಕೊಂಡರು. ಉಪನ್ಯಾಸಕ ಜಗನ್ನಾಥ ಕೊಣಾಜೆ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಪೂವಪ್ಪ ಕೊಂಬಾರು, ಶೇಖರ ವಿಟ್ಲ, ಚೆನ್ನಪ್ಪ ಇಚಿಲಂಪಾಡಿ, ಸುಬ್ಬ ನೆಟ್ಟಣ, ವಾಸು ಪಡುಮಲೆ, ನಾಗಪ್ಪ ಕೊಣಾಜೆ, ಜಿನಪ್ಪ ಮರಕಡ, ಶೀನ ಇಚಿಲಂಪಾಡಿ, ಕೊರಗಪ್ಪ ನರಿಮೊಗೆರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!