July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

ಪಡುಮಲೆ: ತುಳುನಾಡಿನ ಸತ್ಯೋದ ಸೀಮೆಯೆಂದು ಹೆಸರು ಪಡೆದಿರುವ ಕುಂಬ್ಳೆ ಸೀಮೆಯಾದ್ಯಂತ ದ್ಯೆವ ನರ್ತನ ಸೇವೆ ಮಾಡುತ್ತಿರುವ ಪಡುಮಲೆ ಪರವನ್ ಕುಟುಂಬಸ್ಥರ ತರವಾಡು ಮನೆಯಲ್ಲಿ ವಾರ್ಷಿಕ ತಂಬಿಲ ಜೂ.16 ರಂದು ರಾತ್ರಿ ನಡೆಯಿತು. ಊರ ಪರವೂರಿನಲ್ಲಿರುವ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರಾದ ದ್ಯೆವ ನರ್ತಕ ಡಾ.ರವೀಶ್ ಪಡುಮಲೆ ಯವರನ್ನು ವಿಶ್ವನಾಥ ಪಡುಮಲೆಯವರು ಮತ್ತು ಕುಟುಂಬಸ್ಥರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರವೀಶ್ ಪಡುಮಲೆ ಯವರು ನಾವೆಲ್ಲರೂ ನಮ್ಮ ಹಿರಿಯರಿಂದ ಬಂದ ದ್ಯೆವ ನರ್ತನ ಸೇವೆಯನ್ನು ನಿಷ್ಟೆಯಲ್ಲಿ, ಪ್ರಾಮಾಣಿಕವಾಗಿ ಮುಂದುವರಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಮೂಲ ಕಟ್ಟು ಕಟ್ಟಳೆಯನ್ನು ಉಳಿಸೋಣ ಎಂದು ವಿನಂತಿಸಿಕೊಂಡರು. ಉಪನ್ಯಾಸಕ ಜಗನ್ನಾಥ ಕೊಣಾಜೆ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಪೂವಪ್ಪ ಕೊಂಬಾರು, ಶೇಖರ ವಿಟ್ಲ, ಚೆನ್ನಪ್ಪ ಇಚಿಲಂಪಾಡಿ, ಸುಬ್ಬ ನೆಟ್ಟಣ, ವಾಸು ಪಡುಮಲೆ, ನಾಗಪ್ಪ ಕೊಣಾಜೆ, ಜಿನಪ್ಪ ಮರಕಡ, ಶೀನ ಇಚಿಲಂಪಾಡಿ, ಕೊರಗಪ್ಪ ನರಿಮೊಗೆರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!