23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

ಪಡುಮಲೆ: ತುಳುನಾಡಿನ ಸತ್ಯೋದ ಸೀಮೆಯೆಂದು ಹೆಸರು ಪಡೆದಿರುವ ಕುಂಬ್ಳೆ ಸೀಮೆಯಾದ್ಯಂತ ದ್ಯೆವ ನರ್ತನ ಸೇವೆ ಮಾಡುತ್ತಿರುವ ಪಡುಮಲೆ ಪರವನ್ ಕುಟುಂಬಸ್ಥರ ತರವಾಡು ಮನೆಯಲ್ಲಿ ವಾರ್ಷಿಕ ತಂಬಿಲ ಜೂ.16 ರಂದು ರಾತ್ರಿ ನಡೆಯಿತು. ಊರ ಪರವೂರಿನಲ್ಲಿರುವ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರಾದ ದ್ಯೆವ ನರ್ತಕ ಡಾ.ರವೀಶ್ ಪಡುಮಲೆ ಯವರನ್ನು ವಿಶ್ವನಾಥ ಪಡುಮಲೆಯವರು ಮತ್ತು ಕುಟುಂಬಸ್ಥರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರವೀಶ್ ಪಡುಮಲೆ ಯವರು ನಾವೆಲ್ಲರೂ ನಮ್ಮ ಹಿರಿಯರಿಂದ ಬಂದ ದ್ಯೆವ ನರ್ತನ ಸೇವೆಯನ್ನು ನಿಷ್ಟೆಯಲ್ಲಿ, ಪ್ರಾಮಾಣಿಕವಾಗಿ ಮುಂದುವರಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಮೂಲ ಕಟ್ಟು ಕಟ್ಟಳೆಯನ್ನು ಉಳಿಸೋಣ ಎಂದು ವಿನಂತಿಸಿಕೊಂಡರು. ಉಪನ್ಯಾಸಕ ಜಗನ್ನಾಥ ಕೊಣಾಜೆ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಪೂವಪ್ಪ ಕೊಂಬಾರು, ಶೇಖರ ವಿಟ್ಲ, ಚೆನ್ನಪ್ಪ ಇಚಿಲಂಪಾಡಿ, ಸುಬ್ಬ ನೆಟ್ಟಣ, ವಾಸು ಪಡುಮಲೆ, ನಾಗಪ್ಪ ಕೊಣಾಜೆ, ಜಿನಪ್ಪ ಮರಕಡ, ಶೀನ ಇಚಿಲಂಪಾಡಿ, ಕೊರಗಪ್ಪ ನರಿಮೊಗೆರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!