ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ತ್ಯಾಗ ಬಲಿದಾನದ ಹಬ್ಬ ಬಕ್ರೀದ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು.


ಖತೀಬ್ ಸಿರಾಜುದ್ದೀನ್ ಸ‌ಅದಿ ಖುತುಬಾ ಪಾರಾಯಣ ಮತ್ತು ಪೆರ್ನಾಳ್ ನಮಾಝ್ ಗೆ ನೇತೃತ್ವ ನೀಡಿ ಹಬ್ಬದ ಸಂದೇಶ ನಡೆಸಿಕೊಟ್ಟರು.


ಯಾಸೀನ್ ಸಾಮೂಹಿಕ ದುಆ ಪ್ರಾರ್ಥನೆ ನೆರವೇರಿಸಿದರು. ಅಧ್ಯಕ್ಷರು, ಪದಾಧಿಕಾರಿಗಳು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

ಹಬ್ಬದ ಪ್ರಯುಕ್ತ ಹೊಸ ವಸ್ತ್ರ ಧರಿಸಿ ಮಸೀದಿಗೆ ಆಗಮಿಸಿದ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಾರ್ಥನೆಯ ಬಳಿಕ ಪರಸ್ಪರ ಮನೆಗೆ ಭೇಟಿ ನೀಡಿ ಸಂಭ್ರಮಿಸಿದರು.

Leave a Comment

error: Content is protected !!