April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ  ಜೂ. 22 ರಂದು ಶನಿವಾರ ಸಂಜೆ ಗಂಟೆ 6.15 ರಿಂದ  ಧರ್ಮಸ್ಥಳದಲ್ಲಿ ಅಮೃತವರ್ಷಿಣಿ  ಸಭಾಭವನದಲ್ಲಿ ನಡೆಯಲಿದೆ.


ಕುಮಾರಿ ಚೈತ್ರ ಭಟ್ ಅವರ ಗುರು ಗೀತಾ ಸರಳಾಯರ ನೃತ್ಯನಿರ್ದೇಶನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ವಿದುಷಿ ರಶ್ಮಿ ಚಿದಾನಂದ (ನಟುವಾಂಗ), ಸ್ವರಾಗ್, ಮಾಹೆ (ಹಾಡುಗಾರಿಕೆ), ಉಡುಪಿಯ ವಿದ್ವಾನ್ ಬಾಲಚಂದ್ರಭಾಗವತ್ (ಮೃದಂಗ) ಬೆಂಗಳೂರಿನ ದೂರದರ್ಶನ ಕಲಾವಿದ ವಿದ್ವಾನ್ ಗಣೇಶ್ ಕೆ.ಎಸ್. (ಕೊಳಲು) ಹಿಮ್ಮೇಳದಲ್ಲಿ ಸಹಕರಿಸುವರು.

ಸಭಾ ಕಾರ್ಯಕ್ರಮ: ಶನಿವಾರ ರಾತ್ರಿ ಗಂಟೆ 7.30 ರಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಉಳ್ಳಾಲ ಮೋಹನ್ ಕುಮಾರ್ ಮತ್ತು ಸುರತ್ಕಲ್ ಸುಧಾಕರ ರಾವ್ ಪೇಜಾವರ ಶುಭಾಶಂಸನೆ ಮಾಡುವರು.


Related posts

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!