September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ  ಜೂ. 22 ರಂದು ಶನಿವಾರ ಸಂಜೆ ಗಂಟೆ 6.15 ರಿಂದ  ಧರ್ಮಸ್ಥಳದಲ್ಲಿ ಅಮೃತವರ್ಷಿಣಿ  ಸಭಾಭವನದಲ್ಲಿ ನಡೆಯಲಿದೆ.


ಕುಮಾರಿ ಚೈತ್ರ ಭಟ್ ಅವರ ಗುರು ಗೀತಾ ಸರಳಾಯರ ನೃತ್ಯನಿರ್ದೇಶನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ವಿದುಷಿ ರಶ್ಮಿ ಚಿದಾನಂದ (ನಟುವಾಂಗ), ಸ್ವರಾಗ್, ಮಾಹೆ (ಹಾಡುಗಾರಿಕೆ), ಉಡುಪಿಯ ವಿದ್ವಾನ್ ಬಾಲಚಂದ್ರಭಾಗವತ್ (ಮೃದಂಗ) ಬೆಂಗಳೂರಿನ ದೂರದರ್ಶನ ಕಲಾವಿದ ವಿದ್ವಾನ್ ಗಣೇಶ್ ಕೆ.ಎಸ್. (ಕೊಳಲು) ಹಿಮ್ಮೇಳದಲ್ಲಿ ಸಹಕರಿಸುವರು.

ಸಭಾ ಕಾರ್ಯಕ್ರಮ: ಶನಿವಾರ ರಾತ್ರಿ ಗಂಟೆ 7.30 ರಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಉಳ್ಳಾಲ ಮೋಹನ್ ಕುಮಾರ್ ಮತ್ತು ಸುರತ್ಕಲ್ ಸುಧಾಕರ ರಾವ್ ಪೇಜಾವರ ಶುಭಾಶಂಸನೆ ಮಾಡುವರು.


Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ತಣ್ಣೀರುಪಂತ: ಕುದ್ರಡ್ಕ ನಿವಾಸಿ ಗಿರಿಜಾ ನಿಧನ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya
error: Content is protected !!