July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ  ಜೂ. 22 ರಂದು ಶನಿವಾರ ಸಂಜೆ ಗಂಟೆ 6.15 ರಿಂದ  ಧರ್ಮಸ್ಥಳದಲ್ಲಿ ಅಮೃತವರ್ಷಿಣಿ  ಸಭಾಭವನದಲ್ಲಿ ನಡೆಯಲಿದೆ.


ಕುಮಾರಿ ಚೈತ್ರ ಭಟ್ ಅವರ ಗುರು ಗೀತಾ ಸರಳಾಯರ ನೃತ್ಯನಿರ್ದೇಶನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ವಿದುಷಿ ರಶ್ಮಿ ಚಿದಾನಂದ (ನಟುವಾಂಗ), ಸ್ವರಾಗ್, ಮಾಹೆ (ಹಾಡುಗಾರಿಕೆ), ಉಡುಪಿಯ ವಿದ್ವಾನ್ ಬಾಲಚಂದ್ರಭಾಗವತ್ (ಮೃದಂಗ) ಬೆಂಗಳೂರಿನ ದೂರದರ್ಶನ ಕಲಾವಿದ ವಿದ್ವಾನ್ ಗಣೇಶ್ ಕೆ.ಎಸ್. (ಕೊಳಲು) ಹಿಮ್ಮೇಳದಲ್ಲಿ ಸಹಕರಿಸುವರು.

ಸಭಾ ಕಾರ್ಯಕ್ರಮ: ಶನಿವಾರ ರಾತ್ರಿ ಗಂಟೆ 7.30 ರಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಉಳ್ಳಾಲ ಮೋಹನ್ ಕುಮಾರ್ ಮತ್ತು ಸುರತ್ಕಲ್ ಸುಧಾಕರ ರಾವ್ ಪೇಜಾವರ ಶುಭಾಶಂಸನೆ ಮಾಡುವರು.


Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya

ನಿವೃತ್ತ ಸಾಧಕ ಯೋಧ ಪ್ರಶಸ್ತಿ ಸ್ವೀಕರಿಸಿ ಆಗಮಿಸಿದ ಲ| ಡಾ.ಗೋಪಾಲಕೃಷ್ಣ ಕಾಂಚೋಡು: ಉಜಿರೆಯಲ್ಲಿ ಭವ್ಯವಾದ ಸ್ವಾಗತ – ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!