23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ  ಜೂ. 22 ರಂದು ಶನಿವಾರ ಸಂಜೆ ಗಂಟೆ 6.15 ರಿಂದ  ಧರ್ಮಸ್ಥಳದಲ್ಲಿ ಅಮೃತವರ್ಷಿಣಿ  ಸಭಾಭವನದಲ್ಲಿ ನಡೆಯಲಿದೆ.


ಕುಮಾರಿ ಚೈತ್ರ ಭಟ್ ಅವರ ಗುರು ಗೀತಾ ಸರಳಾಯರ ನೃತ್ಯನಿರ್ದೇಶನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ವಿದುಷಿ ರಶ್ಮಿ ಚಿದಾನಂದ (ನಟುವಾಂಗ), ಸ್ವರಾಗ್, ಮಾಹೆ (ಹಾಡುಗಾರಿಕೆ), ಉಡುಪಿಯ ವಿದ್ವಾನ್ ಬಾಲಚಂದ್ರಭಾಗವತ್ (ಮೃದಂಗ) ಬೆಂಗಳೂರಿನ ದೂರದರ್ಶನ ಕಲಾವಿದ ವಿದ್ವಾನ್ ಗಣೇಶ್ ಕೆ.ಎಸ್. (ಕೊಳಲು) ಹಿಮ್ಮೇಳದಲ್ಲಿ ಸಹಕರಿಸುವರು.

ಸಭಾ ಕಾರ್ಯಕ್ರಮ: ಶನಿವಾರ ರಾತ್ರಿ ಗಂಟೆ 7.30 ರಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಉಳ್ಳಾಲ ಮೋಹನ್ ಕುಮಾರ್ ಮತ್ತು ಸುರತ್ಕಲ್ ಸುಧಾಕರ ರಾವ್ ಪೇಜಾವರ ಶುಭಾಶಂಸನೆ ಮಾಡುವರು.


Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya
error: Content is protected !!