30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ ಇರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅನೇಕ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆದುದರಿಂದ ಈಗ ಇರುವ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ, ಮೊದಲಾದ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಯವರಿಗೆ ಮನವಿಯನ್ನು ಸಲ್ಲಿಸಿದರು.

Related posts

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya
error: Content is protected !!