ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

ಮುಂಡಾಜೆ : ದೇವಾಂಗ ಸಮಾಜ ಅಭಿವೃದ್ಧಿಯೊಂದಿಗೆ ಪರಿಸರದ ಕಾಳಜಿ, ಇಲ್ಲಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ತಮ್ಮನ್ನು ತಾವು ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಭಾಸ್ಕರ ಎಂ.ಡಿ ಹೇಳಿದರು.


ಇವರು ಚಂದ್ಕೂರಿನ ಮನೆಯಲ್ಲಿ ಇತ್ತೀಚೆಗೆ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.


ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ಆಯೋಜನೆ, ವನಮಹೋತ್ಸವ, ದತ್ತಿನಿಧಿ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಯಶಸ್ವಿಗೊಳಿಸುವುದೆಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಸಮಾಜಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಸಹಕರಿಸುತ್ತಿರುವ ವಿನೋದ್ , ಸಿಂಗಾಪುರ ಇವರನ್ನು ಸನ್ಮಾನಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ರಾಜ್ ಗೋಪಾಲ್, ಸೋಮಂತಡ್ಕ ವಹಿಸಿದ್ದರು. ವೇದಿಕೆಯಲ್ಲಿ ದೇವಾಂಗ ಸಮಾಜ ಉಜಿರೆ ವಲಯದ ಅಧ್ಯಕ್ಷ ರವಿ ನೆಯ್ಯಾಲು, ವಲಯ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು, ಘಟಕದ ಕಾರ್ಯದರ್ಶಿ ಮಹೇಂದ್ರ ಕೊಡಂಗೆ, ಕೋಶಾಧಿಕಾರಿ ಗಣೇಶ್ ದೇವಾಂಗ ಮೂಲಾರು ಉಪಸ್ಥಿತರಿದ್ದರು.


ಸೌಮ್ಮಪ್ರಭಾ ಮೂಲಾರು ಪ್ರಾರ್ಥಿಸಿದರು, ಮಂಜೇಶ್ ಕೊಡಂಗೆ ಸ್ವಾಗತಿಸಿ, ಶಶಿಧರ್ ವಂದಿಸಿದರು. ಸವಿತಾ ಕೇಶವ ದೇವಾಂಗ ಕಾರ್ಯಕ್ರಮ ನಿರೂಪಿಸಿದರು.

Related posts

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!