26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

ಮುಂಡಾಜೆ : ದೇವಾಂಗ ಸಮಾಜ ಅಭಿವೃದ್ಧಿಯೊಂದಿಗೆ ಪರಿಸರದ ಕಾಳಜಿ, ಇಲ್ಲಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ತಮ್ಮನ್ನು ತಾವು ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಭಾಸ್ಕರ ಎಂ.ಡಿ ಹೇಳಿದರು.


ಇವರು ಚಂದ್ಕೂರಿನ ಮನೆಯಲ್ಲಿ ಇತ್ತೀಚೆಗೆ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.


ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ಆಯೋಜನೆ, ವನಮಹೋತ್ಸವ, ದತ್ತಿನಿಧಿ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಯಶಸ್ವಿಗೊಳಿಸುವುದೆಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಸಮಾಜಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಸಹಕರಿಸುತ್ತಿರುವ ವಿನೋದ್ , ಸಿಂಗಾಪುರ ಇವರನ್ನು ಸನ್ಮಾನಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ರಾಜ್ ಗೋಪಾಲ್, ಸೋಮಂತಡ್ಕ ವಹಿಸಿದ್ದರು. ವೇದಿಕೆಯಲ್ಲಿ ದೇವಾಂಗ ಸಮಾಜ ಉಜಿರೆ ವಲಯದ ಅಧ್ಯಕ್ಷ ರವಿ ನೆಯ್ಯಾಲು, ವಲಯ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು, ಘಟಕದ ಕಾರ್ಯದರ್ಶಿ ಮಹೇಂದ್ರ ಕೊಡಂಗೆ, ಕೋಶಾಧಿಕಾರಿ ಗಣೇಶ್ ದೇವಾಂಗ ಮೂಲಾರು ಉಪಸ್ಥಿತರಿದ್ದರು.


ಸೌಮ್ಮಪ್ರಭಾ ಮೂಲಾರು ಪ್ರಾರ್ಥಿಸಿದರು, ಮಂಜೇಶ್ ಕೊಡಂಗೆ ಸ್ವಾಗತಿಸಿ, ಶಶಿಧರ್ ವಂದಿಸಿದರು. ಸವಿತಾ ಕೇಶವ ದೇವಾಂಗ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!