27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ  ಜೂ. 22 ರಂದು ಶನಿವಾರ ಸಂಜೆ ಗಂಟೆ 6.15 ರಿಂದ  ಧರ್ಮಸ್ಥಳದಲ್ಲಿ ಅಮೃತವರ್ಷಿಣಿ  ಸಭಾಭವನದಲ್ಲಿ ನಡೆಯಲಿದೆ.


ಕುಮಾರಿ ಚೈತ್ರ ಭಟ್ ಅವರ ಗುರು ಗೀತಾ ಸರಳಾಯರ ನೃತ್ಯನಿರ್ದೇಶನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ವಿದುಷಿ ರಶ್ಮಿ ಚಿದಾನಂದ (ನಟುವಾಂಗ), ಸ್ವರಾಗ್, ಮಾಹೆ (ಹಾಡುಗಾರಿಕೆ), ಉಡುಪಿಯ ವಿದ್ವಾನ್ ಬಾಲಚಂದ್ರಭಾಗವತ್ (ಮೃದಂಗ) ಬೆಂಗಳೂರಿನ ದೂರದರ್ಶನ ಕಲಾವಿದ ವಿದ್ವಾನ್ ಗಣೇಶ್ ಕೆ.ಎಸ್. (ಕೊಳಲು) ಹಿಮ್ಮೇಳದಲ್ಲಿ ಸಹಕರಿಸುವರು.

ಸಭಾ ಕಾರ್ಯಕ್ರಮ: ಶನಿವಾರ ರಾತ್ರಿ ಗಂಟೆ 7.30 ರಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಉಳ್ಳಾಲ ಮೋಹನ್ ಕುಮಾರ್ ಮತ್ತು ಸುರತ್ಕಲ್ ಸುಧಾಕರ ರಾವ್ ಪೇಜಾವರ ಶುಭಾಶಂಸನೆ ಮಾಡುವರು.


Related posts

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!