30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ  ಜೂ. 22 ರಂದು ಶನಿವಾರ ಸಂಜೆ ಗಂಟೆ 6.15 ರಿಂದ  ಧರ್ಮಸ್ಥಳದಲ್ಲಿ ಅಮೃತವರ್ಷಿಣಿ  ಸಭಾಭವನದಲ್ಲಿ ನಡೆಯಲಿದೆ.


ಕುಮಾರಿ ಚೈತ್ರ ಭಟ್ ಅವರ ಗುರು ಗೀತಾ ಸರಳಾಯರ ನೃತ್ಯನಿರ್ದೇಶನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ವಿದುಷಿ ರಶ್ಮಿ ಚಿದಾನಂದ (ನಟುವಾಂಗ), ಸ್ವರಾಗ್, ಮಾಹೆ (ಹಾಡುಗಾರಿಕೆ), ಉಡುಪಿಯ ವಿದ್ವಾನ್ ಬಾಲಚಂದ್ರಭಾಗವತ್ (ಮೃದಂಗ) ಬೆಂಗಳೂರಿನ ದೂರದರ್ಶನ ಕಲಾವಿದ ವಿದ್ವಾನ್ ಗಣೇಶ್ ಕೆ.ಎಸ್. (ಕೊಳಲು) ಹಿಮ್ಮೇಳದಲ್ಲಿ ಸಹಕರಿಸುವರು.

ಸಭಾ ಕಾರ್ಯಕ್ರಮ: ಶನಿವಾರ ರಾತ್ರಿ ಗಂಟೆ 7.30 ರಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಉಳ್ಳಾಲ ಮೋಹನ್ ಕುಮಾರ್ ಮತ್ತು ಸುರತ್ಕಲ್ ಸುಧಾಕರ ರಾವ್ ಪೇಜಾವರ ಶುಭಾಶಂಸನೆ ಮಾಡುವರು.


Related posts

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya
error: Content is protected !!