23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ  ಜೂ. 22 ರಂದು ಶನಿವಾರ ಸಂಜೆ ಗಂಟೆ 6.15 ರಿಂದ  ಧರ್ಮಸ್ಥಳದಲ್ಲಿ ಅಮೃತವರ್ಷಿಣಿ  ಸಭಾಭವನದಲ್ಲಿ ನಡೆಯಲಿದೆ.


ಕುಮಾರಿ ಚೈತ್ರ ಭಟ್ ಅವರ ಗುರು ಗೀತಾ ಸರಳಾಯರ ನೃತ್ಯನಿರ್ದೇಶನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ವಿದುಷಿ ರಶ್ಮಿ ಚಿದಾನಂದ (ನಟುವಾಂಗ), ಸ್ವರಾಗ್, ಮಾಹೆ (ಹಾಡುಗಾರಿಕೆ), ಉಡುಪಿಯ ವಿದ್ವಾನ್ ಬಾಲಚಂದ್ರಭಾಗವತ್ (ಮೃದಂಗ) ಬೆಂಗಳೂರಿನ ದೂರದರ್ಶನ ಕಲಾವಿದ ವಿದ್ವಾನ್ ಗಣೇಶ್ ಕೆ.ಎಸ್. (ಕೊಳಲು) ಹಿಮ್ಮೇಳದಲ್ಲಿ ಸಹಕರಿಸುವರು.

ಸಭಾ ಕಾರ್ಯಕ್ರಮ: ಶನಿವಾರ ರಾತ್ರಿ ಗಂಟೆ 7.30 ರಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಉಳ್ಳಾಲ ಮೋಹನ್ ಕುಮಾರ್ ಮತ್ತು ಸುರತ್ಕಲ್ ಸುಧಾಕರ ರಾವ್ ಪೇಜಾವರ ಶುಭಾಶಂಸನೆ ಮಾಡುವರು.


Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya
error: Content is protected !!