22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ  ಜೂ. 22 ರಂದು ಶನಿವಾರ ಸಂಜೆ ಗಂಟೆ 6.15 ರಿಂದ  ಧರ್ಮಸ್ಥಳದಲ್ಲಿ ಅಮೃತವರ್ಷಿಣಿ  ಸಭಾಭವನದಲ್ಲಿ ನಡೆಯಲಿದೆ.


ಕುಮಾರಿ ಚೈತ್ರ ಭಟ್ ಅವರ ಗುರು ಗೀತಾ ಸರಳಾಯರ ನೃತ್ಯನಿರ್ದೇಶನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ವಿದುಷಿ ರಶ್ಮಿ ಚಿದಾನಂದ (ನಟುವಾಂಗ), ಸ್ವರಾಗ್, ಮಾಹೆ (ಹಾಡುಗಾರಿಕೆ), ಉಡುಪಿಯ ವಿದ್ವಾನ್ ಬಾಲಚಂದ್ರಭಾಗವತ್ (ಮೃದಂಗ) ಬೆಂಗಳೂರಿನ ದೂರದರ್ಶನ ಕಲಾವಿದ ವಿದ್ವಾನ್ ಗಣೇಶ್ ಕೆ.ಎಸ್. (ಕೊಳಲು) ಹಿಮ್ಮೇಳದಲ್ಲಿ ಸಹಕರಿಸುವರು.

ಸಭಾ ಕಾರ್ಯಕ್ರಮ: ಶನಿವಾರ ರಾತ್ರಿ ಗಂಟೆ 7.30 ರಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಉಳ್ಳಾಲ ಮೋಹನ್ ಕುಮಾರ್ ಮತ್ತು ಸುರತ್ಕಲ್ ಸುಧಾಕರ ರಾವ್ ಪೇಜಾವರ ಶುಭಾಶಂಸನೆ ಮಾಡುವರು.


Related posts

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!