25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಬೆಳ್ತಂಗಡಿಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಯೂತ್ ತರಬೇತಿ ಕಾರ್ಯಕ್ರಮ ಜೂ.17 ರಂದು ನಡೆಯಿತು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ) ಅಳದಂಗಡಿ ಇದರ ನಿರ್ದೇಶಕ ವಿಶ್ವನಾಥ್ ಹೊಳ್ಳ ಬಳಂಜ ಉದ್ಘಾಟಿಸಿ ಶುಭ ಹಾರೈಸಿದರು.

ವಲಯ ತರಬೇತುದರರು, ಘಟಕದ ಉಪಾಧ್ಯಕ್ಷರಾದ ಹೇಮಾವತಿ ಕೆ ತರಬೇತಿಯನ್ನು ಅತ್ಯುತಮವಾಗಿ ನಡೆಸಿಕೊಟ್ಟರು. 35 ವಿದ್ಯಾರ್ಥಿನಿಯರು ತರಬೇತಿಯಲ್ಲಿ ಭಾಗವಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿ ವಹಿಸಿ, ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಲ್ಲಿ ತರಬೇತಿಯ ಮಹತ್ವವನ್ನು ವಿವರಿಸಿ ಸ್ವಾಗತಿಸಿದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಚಂದ್ರಪ್ಪ ಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತರಬೇತಿಯ ಪ್ರಯೋಜನದ ಬಗ್ಗೆ ವಿವರಿಸಿ, ಆಯೋಜನೆ ಮಾಡಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.

ವೇದಿಕೆಯಲ್ಲಿ ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್ ಉಪಸ್ಥಿತರಿದ್ದರು. ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷ ನಾರಾಯಣ ಶೆಟ್ಟಿ, ತರಬೇತಿದಾರರ ಪರಿಚಯವನ್ನು ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್, ಜೆಸಿ ವಾಣಿಯನ್ನು ದೀಪ್ತಿ ಕುಲಾಲ್ ವಾಚಿಸಿದರು.

ಕಾರ್ಯಕ್ರಮದಲ್ಲಿ ಪೂರ್ವಧ್ಯಕ್ಷ ಶುಭಾಶ್ಚಂದ್ರ ಎಮ್ ಪಿ ಭಾಗವಹಿಸಿದರು. ಜೊತೆ ಕಾರ್ಯದರ್ಶಿಗಳಾದ ರಾಮಕೃಷ್ಣ ಧನ್ಯವಾದವಿತ್ತರು.

Related posts

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya
error: Content is protected !!