April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜು ನಿಟ್ಟಡೆ ಇಲ್ಲಿನ ಭಾರತೀಯ ಸೇವಾದಳ ಮತ್ತು ಎನ್‌ ಸಿ ಸಿ ಘಟಕವನ್ನು ಜೂ. 15 ರಂದು ಉದ್ಘಾಟಿಸಲಾಯಿತು. ಗಿಡ ನೆಡುವುದರ ಮೂಲಕ ಕಾರ್ಯಕ್ರಮವು ಚಾಲನೆಗೊಂಡಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಟಿ ಎಸ್ ಮಂಜೇಗೌಡ ಜಿಲ್ಲಾ ಸಂಘಟಿತರು ಭಾರತೀಯ ಸೇವಾದಳ ಇವರು ಉಪಸ್ಥಿತರಿದ್ದು ಸೇವಾದಳದಲ್ಲಿ ನಡೆಯುವ ಕಾರ್ಯಕ್ರಮ ಮತ್ತು ರಾಷ್ಟ್ರಧ್ವಜದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ಸೇವಾದಳದ ವಿದ್ಯಾರ್ಥಿಗಳಿಗೆ ಭಾರತೀಯ ಸೇವಾದಳದ ಎಲ್ಲಾ ಶಿಸ್ತುಗಳನ್ನು ಕಲಿತು ದೇಶದ ಒಂದು ಒಳ್ಳೆಯ ಪ್ರಜೆಗಳಾಗಿ ಬಾಳಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಫ್ರಾನ್ಸಿಸ್ ವಿ ವಿ ಈ ವಿದ್ಯಾಸಂಸ್ಥೆ ಇನ್ನಷ್ಟು ಉತ್ತಮ ಮಟ್ಟದಲ್ಲಿ ಬೆಳೆದು ಎಲ್ಲರಿಗೂ ಮಾದರಿಯಾಗಲಿ ಎಂದು ಶುಭ ಹಾರೈಸಿದರು. ಶಾಲೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ಎನ್‌ಸಿಸಿ ಮತ್ತು ಸೇವಾದಳದ ಮಹತ್ವವನ್ನು ತಿಳಿಸಿದರು. ಅದೇ ರೀತಿ ಈ ಕಾರ್ಯಕ್ರಮದಲ್ಲಿ ಭಾರತೀಯ ಸೇವಾದಳ ಬೆಳ್ತಂಗಡಿಯ ಕಾರ್ಯದರ್ಶಿಯಾದ ಗಂಗಾರಾಣಿ ಮತ್ತು ನಿಟ್ಟಡೆ ಕ್ಲಸ್ಟರ್ ಸಿ ಆರ್ ಪಿ ಆರತಿ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್ ಏನ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ವೇತ ಮತ್ತು ಕಿರಿಯ ಪ್ರಾಥಮಿಕ ವಿಭಾಗದ ಉಪ ಮುಖ್ಯ ಶಿಕ್ಷಕಿ ಶ್ವೇತ ನಿರೂಪಿಸಿ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತ ಸ್ವಾಗತಿಸಿ, ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ಧನ್ಯವಾದವಿತ್ತರು.

Related posts

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya
error: Content is protected !!